News Karnataka Kannada
Saturday, May 11 2024
ಕ್ರೈಮ್

ದಂಪತಿ ಮೇಲೆ ಹರಿದ ಕಾರು: ಕನ್ನಡ ಚಲನಚಿತ್ರ ನಟ ನಾಗಭೂಷಣ್​ ವಿರುದ್ಧ ಹಿಟ್​ ಆ್ಯಂಡ್​ ರನ್​ ಕೇಸ್​

Kannada film actor Nagabhushan booked for running over couple
Photo Credit : News Kannada

ಬೆಂಗಳೂರು: ಗಿಚ್ಚಿ ಗಿಲಿಗಿಲಿ ಶೋ ಮೂಲಕ ಕೋಟ್ಯಾಂತರ ಜನರ ಮನಸ್ಸು ಗೆದ್ದಿದ್ದ ಕಾಮಿಡಿ ನಟ ಚಂದ್ರಪ್ರಭ ಅವರು ಚಿಕ್ಕಮಗಳೂರು ಬಸ್ ನಿಲ್ದಾಣದ ಬಳಿ ಅಪಘಾತ ಮಾಡಿ ಕಾರು ನಿಲ್ಲಿಸದೆ ಮಾನವೀಯತೆಯನ್ನೂ ತೋರದೆ ತಿರುಗಿಯೂ ನೋಡದೆ ಹೋಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು.

ಅದೇ ರೀತಿ ಇದೀಗ ಕನ್ನಡ ಚಿತ್ರರಂಗದ ಕಲಾವಿದರೊಬ್ಬರ ಮೇಲೆ ಹಿಟ್​ ಆ್ಯಂಡ್​ ರನ್​ ಕೇಸ್​ ದಾಖಲಾಗಿದೆ. ಕನ್ನಡ ಚಿತ್ರರಂಗದಲ್ಲಿ ನಟನಾಗಿರುವ ನಾಗಭೂಷಣ್​ ವಿರುದ್ಧ ಹಿಟ್​ ಆ್ಯಂಡ್​ ರನ್​ ಕೇಸ್​ ದಾಖಲಾಗಿದೆ. ಸೆಪ್ಟೆಂಬರ್​ 30ರಂದು ಕೋಣನಕುಂಟೆ ಕ್ರಾಸ್​ ಬಳಿ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಾಗಭೂಷಣ್​ ಅವರ ಕಾರು ಡಿಕ್ಕಿ ಆಗಿದೆ.

ಈ ಅಪಘಾತದಲ್ಲಿ 48 ವರ್ಷದ ಪ್ರೇಮಾ​ ಎಸ್​. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ. ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು