News Karnataka Kannada
Monday, April 29 2024
ಕ್ರೈಮ್

ಶಿಕ್ಷಕಿ ಅರ್ಪಿತಾ ಅಪಹರಣಕಾರರು ನೆಲ್ಯಾಡಿ ಬಳಿ ವಶಕ್ಕೆ

ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡ್ನಾಪರ್ಸ್‌ ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
Photo Credit : News Kannada

ಹಾಸನ: ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡ್ನಾಪರ್ಸ್‌ ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ದಕ್ಷಿಣ ಕನ್ನಡ ನೆಲ್ಯಾಡಿ ಬಳಿ ತೆರಳುತ್ತಿದ್ದ ವೇಳೆ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದು, ಶಿಕ್ಷಕಿ ಅರ್ಪಿತ ಅವರನ್ನು ರಕ್ಷಿಸಿದ್ದಾರೆ. ಇದೀಗ ಪೊಲೀಸರಿಗೆ ಸಿಗದ ರೀತಿ ಪ್ಲಾನ್ ಮಾಡಿ ಸಿಕ್ಕಿಬಿದ್ದ ರಾಮು ಮತ್ತು ತಂಡದವರನ್ನು ವಶಕ್ಕೆ ಪಡೆದು ಹಾಸನಕ್ಕೆ ಕರೆತರುತ್ತಿದ್ದಾರೆ.

ಇಂದು(ನ.30) ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಸಿನಿಮೀಯ ರೀತಿಯಲ್ಲಿ ಅಪಹರಿಸಿರುವ ಘಟನೆ ನಡೆದಿತ್ತು. 15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಅವರ ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ನಿಮ್ಮ ಮಗಳನ್ನು ಮದವೆ ಮಾಡಿಕೊಡಿ ಎಂದು ಕೇಳಿದ್ದರು. ಆದರೆ, ಈ ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು