ಕೊಚ್ಚಿ: ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ (ಕುಸಾಟ್) ಶನಿವಾರ ನಡೆದ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತದಲ್ಲಿ ನಾಲ್ವರು ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ.
ನಾಲ್ವರನ್ನು ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ವರದಿಗಳ ಪ್ರಕಾರ, ಕ್ಯಾಂಪಸ್ನ ಬಯಲು ಸಭಾಂಗಣದಲ್ಲಿ ನಡೆದ ಟೆಕ್ ಫೆಸ್ಟ್ ಬಳಿಕ ನಿಖಿತಾ ಗಾಂಧಿಯವರ ಸಂಗೀತ ಕಛೇರಿ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಏಕಾಏಕಿ ಸುರಿದ ಮಳೆಯಿಂದಾಗಿ ವಿದ್ಯಾರ್ಥಿಗಳು ಸಂಗೀತ ಸಭಾಂಗಣಕ್ಕೆ ತರಾತುರಿಯಲ್ಲಿ ಪ್ರವೇಶಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. 2,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಮಾಹಿತಿಯಿದೆ.