News Karnataka Kannada
Friday, May 03 2024
ಕ್ರೈಮ್

ಲವ್‌ ಮಾಡೋಣ ಬಾ ಅಂತ ಕುಂತಿ ಬೆಟ್ಟಕ್ಕೆ ಕರೆದೊಯ್ದು ಕತ್ತುಕೊಯ್ದ ಪ್ರೇಮಿ

Lover takes her to Kunti Hill and slits her throat
Photo Credit : News Kannada

ಹಾಸನ: ಪ್ರೀತಿ ಪ್ರೇಮ ಎಂದು ಹದಿಹರೆಯದ ವಯಸ್ಸಿನಲ್ಲಿ ಹಾದಿ ತಪ್ಪುವವರೇ ಅಧಿಕ. ಪ್ರೀತಿ ಎಂದು ಓಡಾಟ ನಡೆಸುವಾಗ ಇರುವ ಆಕರ್ಷಣೆ ಮುಂದೆ ಇರುವುದಿಲ್ಲ. ಪ್ರೇಮಪ್ರಕರಣಗಳು ದುರಂತ ಅಂತ್ಯ ಹಲವು ಉದಾಹರಣೆಗಳಿವೆ.

ಅಂತಹುದೇ ಒಂದು ಘಟನೆ ಹಾಸನದಲ್ಲಿ ನಡೆದಿದೆ. ಪ್ರೀತಿ ಮಾಡುತ್ತಿದ್ದವನೇ ಪ್ರೇಯಸಿಯನ್ನು ಬೆಟ್ಟಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಈ ದುರ್ಘಟನೆ ಹಾಸನದ ಅಗಿಲೆ ಬಳಿಯ ಕುಂತಿಬೆಟ್ಟದಲ್ಲಿ ನಡೆದಿದೆ. ಸುಚಿತ್ರಾ (21) ಕೊಲೆಯಾದ ಪ್ರಿಯತಮೆ ಆಗಿದ್ದಾಳೆ. ತೇಜಸ್ ಕೊಲೆ ಮಾಡಿದ ಪ್ರಿಯಕರನಾಗಿದ್ದಾನೆ. ಈ ಇಬ್ಬರೂ ಹಾಸನದ ಬಳಿಯಿರುವ ಮೊಸಳೆ ಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಆದರೆ, ಲವ್ ಬ್ರೇಕಪ್ ಆಗಿತ್ತು ಎಂದು ತಿಳಿದು ಬಂದಿದೆ.

ನಾನು ನಿನ್ನೊಂದಿಗೆ ಮಾತನಾಡಬೇಕು ಎಂದು ಆಕೆಯನ್ನು ಹತ್ತಿರದಲ್ಲಿಯೇ ಇರುವ ಕುಂತಿ ಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿ ಬಿಸಾಡಿ ಬಂದಿದ್ದಾನೆ.‌ ಆಕೆಯನ್ನು ಬರ್ಬರವಾಗಿ ಕೊಲೆಗೈದು ಒಬ್ಬನೇ ವಾಪಸ್‌ ಬಂದಿದ್ದಾನೆ. ಅಲ್ಲಿಗೆ ಹೋದವರು ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು