ಮಡಿಕೇರಿ: ಕಾರಿನಲ್ಲಿ ವೈದ್ಯರ ಶವ ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಎಂದು ಗುರುತಿಸಲಾಗಿದೆ. ಮೃತರು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿಸೇವೆ ಸಲಿಸುತ್ತಿದ್ದರು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.