News Karnataka Kannada
Thursday, May 02 2024
ಕ್ರೈಮ್

ಮಹಿಳೆಗೆ ಮದ್ಯನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಆರೋಪಿಯ ಬಂಧನ

Man arrested for sexually assaulting woman after giving her liquor
Photo Credit : News Kannada

ಪುತ್ತೂರು: ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಪುತ್ತೂರಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಆಕೆಗೆ ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಪುತ್ತೂರು ತಾಲ್ಲೂಕಿನ ಆರ್ಯಾಪು ನಿವಾಸಿಯಾಗಿದ್ದು,ಪ್ರಸ್ತುತ ನಗರದ ಹೊರವಲಯದ ಬನ್ನೂರು ಗ್ರಾಮದಲ್ಲಿ ವಾಸ್ತವ್ಯವಿರುವ ಸಂಶುದ್ದೀನ್ ಆಸ್ಗರ್ ಆಲಿ(೨೩) ಬಂಧಿತ ಆರೋಪಿ.

ಆರ್ಯಾಪು ಗ್ರಾಮದ ಸಂಪ್ಯ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕೆಯಾಗಿ ದುಡಿಯುತ್ತಿದ್ದ ಚೆನ್ನರಾಯಪಟ್ಟಣದ ಸಂತ್ರಸ್ತೆ ಮಹಿಳೆ ಕಳೆದ ನ.೨೪ರಂದು ರಾತ್ರಿ ಪುತ್ತೂರಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆಕೆಗೆ ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ ಎಂಬ ಆರೋಪಿಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿಯನ್ನು ಮಂಗಳವಾರ ಸಂಜೆ ಪುತ್ತೂರಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿ ಪತ್ತೆ ಮಾಡಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು