ಬೆಂಗಳೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್ ಸುರಿದಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಅತ್ತೆ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಆರೋಪಿಯು ಮೇ 19 ರಂದು 23 ವರ್ಷದ ಯುವತಿಯನ್ನು ವಿವಾಹವಾಗಿದ್ದ, ಈತ ಮದ್ಯವ್ಯಸನಿಯಾಗಿದ್ದು, ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಅಲ್ಲದೆ ಪತ್ನಿಯಿಂದ ಹಣಕ್ಕೆ ನಿತ್ಯವೂ ಬೇಡಿಕೆಯಿಡುತ್ತಿದ್ದು, ಪದೇ ಪದೆ ಜಗಳ ತೆಗೆಯುತ್ತಿದ್ದ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಪೊಲೀಸರು ವರದಕ್ಷಿಣೆ ಕಿರುಕುಳ ಮತ್ತು ದೈಹಿಕ ಹಲ್ಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.