News Karnataka Kannada
Saturday, April 27 2024
ಕ್ರೈಮ್

ವಿಮಾನದಲ್ಲಿ ಬಂದು ಕಳ್ಳತನ: ಮಂಗಳೂರು ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ದರೋಡೆಕೋರರು

Mangaluru: Robbers caught by Mangaluru railway police
Photo Credit : News Kannada

ಮಂಗಳೂರು: ವಿಮಾನದಲ್ಲಿ ಬಂದು ರೈಲಿನಲ್ಲಿ ಪ್ರಯಾಣಿಕರ ಹಣ, ಚಿನ್ನ ಕದ್ದು ವಾಪಸ್​ ವಿಮಾನದಲ್ಲೇ ಪರಾರಿಯಾಗುತ್ತಿದ್ದ ಅಂತಾರಾಜ್ಯ ಹೈಟೆಕ್‌ ದರೋಡೆಕೋರರು ಕೊನೆಗೂ ಮಂಗಳೂರು ರೈಲ್ವೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಯುಪಿ ಮೂಲದ ಅಭಯರಾಜ್ (26), ಹರಿಶಂಕರ್ ಗಿರಿ(25) ಬಂಧಿತ ಖದೀಮರು.

ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ಮಾರ್ಗದ ರೈಲಿನಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಮೇಲೆ ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಈ ಹೈಟೆಕ್‌ ಕಳ್ಳತನದ ದಂಧೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 28ರಂದು ಮಂಗಳೂರು- ಸುರತ್ಕಲ್ ಮಧ್ಯೆ ರೈಲಿನಲ್ಲಿ ಪ್ರಯಾಣಿಕರ ಸುಲಿಗೆ ನಡೆದಿತ್ತು. ಬಳಿಕ ಮಂಗಳೂರು ರೈಲ್ವೆ ಪೊಲೀಸರು, ಸಂಶಯದಿಂದ ರೈಲಿನಲ್ಲಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಈ ಕೃತ್ಯ ಬಯಲಾಗಿದೆ.

ಸದ್ಯ ಇದೀಗ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದು, ಆರೋಪಿಗಳಿಂದ ಒಟ್ಟು 125 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯವರು ಎಂದು ತಿಳಿದು ಬಂದಿದ್ದು, ಈ ಬಗ್ಗೆ ಮಂಗಳೂರು ರೈಲ್ವೆ ಪೊಲಿಸರು ಇನ್ನಷ್ಟು ತನಿಖೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು