News Karnataka Kannada
Wednesday, May 01 2024
ಕ್ರೈಮ್

ನೀರಿನಲ್ಲಿ ಮುಳುಗಿ ವೈದ್ಯಕೀಯ ವಿದ್ಯಾರ್ಥಿ ಸಾವು

Medical student drowns in water
Photo Credit : News Kannada

ಮೈಸೂರು: ಕಬಿನಿ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಕಿಶನ್(21) ಮೃತ ದುರ್ದೈವಿ. ಈತ ಬೆಂಗಳೂರಿನ ಬಾಣಾವರ ನಿವಾಸಿ ಶೈಲೇಂದ್ರ ಎಂಬವರ ಮಗ ಕಿಶನ್, ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ತರಬೇತಿಗಾಗಿ ತನ್ನ ಐವರು ಸಹಪಾಠಿಗಳೊಂದಿಗೆ ಬಂದಿದ್ದರು.

ಭಾನುವಾರ ರಜಾ ದಿನವಾದ್ದರಿಂದ ಸ್ನೇಹಿತರೊಂದಿಗೆ ಈಜಲೆಂದು ಕಬಿನಿ ಎಡದಂಡೆ ನಾಲೆಗೆ ಹೋಗಿದ್ದಾರೆ. ಈ ವೇಳೆ ಈಜಲು ಬಾರದ ಕಿಶನ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ನೀರಿನಲ್ಲಿ ಮುಳುಗುತಿದ್ದ ಕಿಶನ್‌ಅನ್ನು ಸ್ನೇಹಿತರು ಮೇಲೆತ್ತಲು ಹರಸಾಹಸ ಮಾಡಿದರು ಆ ವೇಳೆಗಾಗಲೇ ಕಿಶನ್ ಸಾವನ್ನಪ್ಪಿದ್ದು, ನಂತರ ಮೃತ ದೇಹವನ್ನು ಹೆಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು