News Karnataka Kannada
Sunday, April 28 2024
ಕ್ರೈಮ್

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ

Moral policing again in Mangaluru
Photo Credit : News Kannada

ಮಂಗಳೂರು: ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ನಡೆದಿದೆ. ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರಿಂದ ದಾಳಿ ಮಾಡಿರುವಂತಹ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.

ಅನ್ಯಕೋಮಿನ ಯುವಕನ ಜತೆ ಮಿಲಾಗ್ರಿಸ್ ಬಳಿ ಯುವತಿ ನಿಂತಿದ್ದಾಳೆ. ಈ ವೇಳೆ ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು