ಮಂಗಳೂರು: ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ಗಿರಿ ನಡೆದಿದೆ. ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರಿಂದ ದಾಳಿ ಮಾಡಿರುವಂತಹ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಅನ್ಯಕೋಮಿನ ಯುವಕನ ಜತೆ ಮಿಲಾಗ್ರಿಸ್ ಬಳಿ ಯುವತಿ ನಿಂತಿದ್ದಾಳೆ. ಈ ವೇಳೆ ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.