News Karnataka Kannada
Thursday, May 02 2024
ಕ್ರೈಮ್

ಅನ್ಯಕೋಮಿನ ಯುವಕರಿಂದ ನೈತಿಕ​ ಪೊಲೀಸ್​ಗಿರಿ: 7 ಆರೋಪಿಗಳ ಬಂಧನ

Moral policing by youths from other communities: 7 accused arrested
Photo Credit : News Kannada

ಬೆಳಗಾವಿ: ಅನ್ಯಕೋಮಿನ ಯುವಕರಿಂದ ನೈತಿಕ​ ಪೊಲೀಸ್​ಗಿರಿಗೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರಿಂದ 17 ಜನರ ವಿರುದ್ಧ ಎಫ್​​ಐಆರ್ ದಾಖಲು ಮಾಡಲಾಗಿದೆ.

ಪ್ರಕರಣ ಏನು: ಕೆಲವು ಮುಸಲ್ಮಾನ್ ಗೂಂಡಾಗಳು ಸಚಿನ್ ಎಂಬ ಯುವಕನ ಮೇಲೆ ದಾಳಿ ಮಾಡಿದ್ದಾರೆ. ಮುಸ್ಲಿಂ ಯುವತಿ ಜತೆ ಏನು ಮಾಡುತ್ತಿದ್ದೀಯ ಎಂದು ಹಲ್ಲೆಗೈದಿದ್ದಾರೆ. ಸಚಿನ್ ಲಮಾಣಿ ಸಂಬಂಧಿಕರು ಮುಸ್ಲಿಂಗೆ ಮತಾಂತರ ಆಗಿದ್ದಾರೆ. ಹಲ್ಲೆಗೊಳಗಾದ ಮುಸ್ಕಾನ್ ಸಚಿನ್​ಗೆ ತಂಗಿ ಆಗಬೇಕು. ಇಬ್ಬರು ಯುವನಿಧಿಗೆ ಅರ್ಜಿ ಹಾಕಲು ಬಂದಾಗ ಹಲ್ಲೆ ನಡೆಸಿದ್ದಾರೆ.

ಮೊಹಮ್ಮದ್​ ಇನಾಂದಾರ್, ಆತೀಫ್ ಅಹಮದ್‌ ಶೇಖ್, ಸೈಫ್​ ಅಲಿ ಮಗ್ದುಮ್, ಉಮರ್​ ಬಡೇಗರ್, ಅಜಾನ್ ಕಾಲಕುಂದ್ರಿ, ರಿಯಾನ್ ರೋಟವಾಲೆ 7 ಜನ ಬಂಧಿತರು.

ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ತೆರಳಿದ್ದು, ಸಂತ್ರಸ್ತ ಯುವಕ, ಯುವತಿಯನ್ನು ಭೇಟಿ ಮಾಡಿದ್ದಾರೆ. ಕುಟುಂಬಸ್ಥರ ಜೊತೆ ಮಾತನಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಕೆಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಕೋಶಾಧ್ಯಕ್ಷ ಕೃಷ್ಣಭಟ್ ನೇತೃತ್ವದಲ್ಲಿ ಭೇಟಿ ಮಾಡಿ ಸಂತ್ರಸ್ತ ಯುವಕ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ. ಕುಟುಂಬದವರಿಗೂ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು