ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಆರ್ ಸರ್ಕಲ್ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಏಳು ಜನ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಪ್ರಕರಣ ಸಂಬಂಧ ಎರಡು ವಾರದಲ್ಲಿ ಸಂಪೂರ್ಣ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಆರ್ ಸರ್ಕಲ್ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ಉತ್ತರ ವಿಭಾಗದ ಮುಖ್ಯ ಅಭಿಯಂತರ, ಬೆಸ್ಕಾಂ ಪೂರ್ವ ವೃತ್ತದ ಮೇಲ್ವಿಚಾರಕ ಅಭಿಯಂತರ, ಕಾರ್ಯನಿರ್ವಾಹಕ ಅಭಿಯಂತರ ವೈಟ್ಫಿಲ್ಡ್ ವಿಭಾಗ, ಹೋಫ್ ಫಾರಂ ಸಿಗ್ನಲ್ ವೈಟ್ಫಿಲ್ಡ್ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮತ್ತು ಹೋಫ್ ಫಾರಂ ಸಿಗ್ನಲ್ ವೈಟ್ಫಿಲ್ಡ್ನ ಸಹಾಯಕ ಅಭಿಯಂತರ ವಿರುದ್ಧ ವಿರುದ್ಧ ಸೆಕ್ಷನ್ 7(1)(B) ಆಫ್ ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಮಾಲ್ ಅಡ್ಮಿನಿಸ್ಟ್ರೇಷನ್ 2(10) ಅಡಿಯಲ್ಲಿ ಕೇಸ್ ದಾಖಲಾಗಿದೆ.