ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ನಿವಾಸದಲ್ಲಿ ಎರಡು ವರ್ಷದ ಪುಟ್ಟ ಕಂದಮ್ಮಳನ್ನ ಕೊಂದು ತಾಯಿಯೂ ನೇಣಿಗೆ ಕೊರಳೊಡ್ಡಿರುವ ದಾರುಣ ಘಟನೆ ನಡೆದಿದೆ.
ತಾಯಿ ಶಿವಲೀಲಾ (23) ಹಾಗೂ ವರ್ಷಿತಾ(2) ಮೃತ ರ್ದುದೈವಿಗಳು.
ಚಿಂಚೋಳಿ ತಾಲ್ಲೂಕಿನ ಕೆರೋಳ್ಳಿ ಗ್ರಾಮದ ನಿವಾಸಿಯಾಗಿರುವ ಶಿವಲೀಲಾ, ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆ ಮಾಡಿಕೊಡಲಾಗಿತ್ತು. ಇಷ್ಟು ದಿನ ಇಬ್ಬರು ಚೆನ್ನಾಗಿಯೇ ಇದ್ದರು. ಅಲ್ಲದೆ ನಿನ್ನೆಯಷ್ಟೆ ತವರು ಮನೆಯಿಂದ ವಾಪಸ್ ಅಗಿದ್ದಳು. ಅಷ್ಟೇ ಸಂಜೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮಗುವನ್ನು ಕೊಂದು ತಾನೂ ನೇಣಿಗೆ ಶರಣಾಗಿದ್ದಾಳೆ. ತಾಯಿ ಮಗಳ ಸಾವನ್ನ ಕಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು ಮೊದ ಮೊದಲು ಗಂಡ ಅತ್ತೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರಬುಹುದು ಎನ್ನುವ ಶಂಕೆ ವ್ಯಕ್ತವಾಗಿತ್ತು. ಆದ್ರೆ, ಸದ್ಯ ಮೃತಳ ಸಂಬಂಧಿಕರೇ ‘ಶಿವಲೀಲಾ ಸ್ವಲ್ಪ ಮುಂಗೊಪಿಯಾಗಿದ್ದಳು. ಅಲ್ಲದೇ ಆಕೆ ಯಾಕೆ ಸಾವನ್ನಪ್ಪಿದ್ದಾಳೆ ಎನ್ನುವ ನಿಖರ ಕಾರಣ ಗೊತ್ತಿಲ್ಲ ಎನ್ನುತ್ತಿದ್ದಾರೆ.
ಹೆಂಡತಿಯನ್ನ ಕರೆದುಕೊಂಡು ಬರುವುದಕ್ಕೆ ಹೋಗಿದ್ದ ಗಂಡ ಆನಂದ ದೇಸಾಯಿ ಕೂಡ ಹೆಂಡತಿ ಮನೆಯಲ್ಲಿಯೇ ಎರಡ್ಮೂರು ದಿನ ಇದ್ದನಂತೆ. ನಿನ್ನೆಯಷ್ಟೆ ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಬಂದಿದ್ದ. ಆದ್ರೆ, ಇದ್ದಕ್ಕಿಂತದ್ದೇ ಶಿವಲೀಲಾ ಇಂತಹ ನಿರ್ಧಾರಕ್ಕೆ ಬಂದಿದ್ದು ಯಾಕೆ ಎನ್ನುವ ಹತ್ತಾರು ಪ್ರಶ್ನೆ ಮೂಡುತ್ತಿವೆ.
ಒಟ್ಟಿನಲ್ಲಿ ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಚಿಂಚೋಳಿ ಪೊಲೀಸರು, ತನಿಖೆಗಿಳಿದಿದ್ದಾರೆ. ತನ್ನ ಕರುಳ ಕುಡಿಯನ್ನ ಕೊಂದು ಆಕೆಗೆ ನೇಣಿಗೆ ಶರಣಾಗಿದ್ದೇಕೆ, ಗಂಡನ ಮನೆಯವರ ಕಿರುಕುಳವಾ? ಅಥವಾ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಳಾ ಎನ್ನುವ ಬಗ್ಗೆ ಪೊಲೀಸರ ತನಿಖೆಯಿಂದಲೇ ಬಟ ಬಯಲಾಗಬೇಕು. ಅದೇನೆ ಇರಲಿ ತಾನು ನೇಣಿಗೆ ಶರಣಾಗಿದ್ದಲ್ಲದೇ ಏನು ಅರಿಯದ ಮುದ್ದು ಕಂದಮ್ಮನನ್ನು ಕೊಂದಿದ್ದು ನಿಜಕ್ಕೂ ದುರಂತವೇ ಸರಿ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821
ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…
ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಇತ್ತೀಚೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬ್ಬಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕು. ಮೀನಾಳ ಕೊಲೆಯನ್ನು ಖಂಡಿಸಿ ಧಾರವಾಡ ಜಿಲ್ಲಾ ಅಹಿಂದ…
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಅಂಜಿನಮ್ಮ ಎನ್ನುವ ಮಹಿಳೆಯೋರ್ವರು, ಆಹಾರ ಇಲಾಖೆಯ ಯಡವಟ್ಟಿನಿಂದ ಅವರು ಸೌಕರ್ಯಗಳಿಂದ ವಂಚಿಯರಾಗಿದ್ದಾರೆ.
ಶ್ರೀ ಜಗಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿ ಎಲ್ಲರಿಗೂ ಸಮಾನತೆ ಇರಬೇಕೆಂಬ ಒಳ್ಳೆಯ ಆಲೋಚನೆಯನ್ನು ಇಟ್ಟುಕೊಂಡು ಜಾತಿ ಪದ್ದತಿ ನಿರ್ಮೂಲನೆ ಮಾಡಲು,…
ಕ್ಷುಲ್ಲಕ ವಿಚಾರಕ್ಕೆ ಯುವಕನೊರ್ವನ ಮೇಲೆ ಗುಂಪೊಂದು ಜಾತಿ ನಿಂದನೆ ಮಾಡಿ, ಹಲ್ಲೇ ಮಾಡಿರುವ ಘಟನೆ ಗೋಪ್ಪನಕೊಪ್ಪದ ಗೊಲ್ಲರ ಓಣಿಯಲ್ಲಿ ನಡೆದಿದೆ.