ಕಲಬುರಗಿ: ನಗರದ ಆಶ್ರಯ ಕಾಲೋನಿಯಲ್ಲಿ ಕೊಟ್ಟ ಸಾಲ ವಾಪಸ್ ಕೇಳಿದಕ್ಕೆ ಜೊತೆಗಿದ್ದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ನಡೆದಿದೆ.
ಮೃತ ವ್ಯಕ್ತಿ ಯನ್ನು ರೋಹನ್ ಎಂದು ಗುರುತಿಸಲಾಗಿದೆ. ಫೆಬ್ರವರಿ 6 ರಂದು ಸುನೀಲ್ ಸಿಂಗ್ , ಭಗತ್ ಸಿಂಗ್ ಸೊಹೇಲ್ ಎಂಬುವವರು ಜೊತೆಗಿದ್ದ ಸ್ನೇಹಿತ ರೋಹನ್ ಎಂಬಾತನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಕೊಲೆಯ ಬಳಿಕ ನಾಲ್ಕು ಜನ ಆರೋಪಿಗಳು ಎಸ್ಕೇಪ್ ಆಗಿದ್ದರು.
ಕೊಲೆ ಪ್ರಕರಣವನ್ನ ದಾಖಲಿಸಿಕೊಂಡ ಚೌಕ್ ಪೊಲೀಸರು, ಇದೀಗ ಮೂರು ಜನ ಆರೋಪಿಗಳನ್ನ ಬಂಧಿಸಿದ್ದಾರೆ.