ವಿಜಯಪುರ: ತಿಕೋಟ ತಾಲೂಕಿನ ಹುಬನೂರು ತಾಂಡಾ -2 ರಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಮೃತ ಮಹಿಳೆಯನ್ನು ರೇಶ್ಮಾ ರಾಠೋಡ್ (25) ಎಂದು ಗುರುತಿಸಲಾಗಿದೆ. ಅಶೋಕ್ ರಾಠೋಡ್ (33) ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ತನ್ನ ಪತ್ನಿಯ ಶೀಲ ಶಂಕಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಈತ ಕುಡಿದು ಬಂದು ಮನೆಯಲ್ಲಿ ಪತ್ನಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ. ಇದರಿಂದ ಬೇಸತ್ತು ಮಹಿಳೆ ತನ್ನ ತವರು ಮನೆಗೆ ಹೋಗಿದ್ದಳು. ಇದರಿಂದ ಸಿಟ್ಟಿಗೆದ್ದ ಆರೋಪಿ ಮಹಿಳೆಯ ಮೇಲೆ ಸಲಾಕೆಯಿಂದ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ ಎಂದು ತಿಳಿದುಬಂದಿದೆ.
ಸದ್ಯ ಈ ಪ್ರಕರಣ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.