ಶಿವಮೊಗ್ಗ: ದಾಯಾದಿ ಕಲಹದಿಂದಾಗಿ ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ಮಹೇಶಪ್ಪ ಅವರನ್ನು ದಾಯಾದಿ ಕುಮಾರಪ್ಪ ಮತ್ತು ಆತನ ಮಗ ಕಾರ್ತಿಕ್ ಎಂಬುವರು, ಬೈಕ್ ತಡೆದು ಪೆಟ್ರೋಲ್ ಸುರಿದು ಜೀವಂತ ಸುಟ್ಟಿದ್ದಾರೆ.
ಜೊತೆಗೆ ಆತನ ಬಳಿಯಿದ್ದ 60 ಸಾವಿರ ರೂಪಾಯಿ ನಗದು ಮತ್ತು ಬೈಕ್ನ್ನು ಸುಟ್ಟು ಹಾಕಿ ಅಟ್ಟಹಾಸ ಮೆರೆದಿದ್ದಾರೆ. ಬೆಂಕಿಯಿಂದ ಸುಟ್ಟುಗಾಯವಾಗಿದ್ದ ವ್ಯಕ್ತಿಯು ಅಳಿಯನಿಗೆ ಕಾಲ್ ಮಾಡಿ ಸಾಯುವ ಮೊದಲು ತನ್ನ ಹತ್ಯೆ ಮಾಡಿದ ಇಬ್ಬರ ಹೆಸರನ್ನು ಹೇಳಿದ್ದಾನೆ. ಸುಟ್ಟ ಗಾಯದಿಂದ ಬಳಲುತ್ತಿದ್ದ ವ್ಯಕ್ತಿಯು ನರಳಾಡುತ್ತಿರುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ. ಕೊಲೆ ಮಾಡಿದ ಕುಮಾರಪ್ಪ ಮತ್ತು ಕಾರ್ತಿಕ್ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.