ಹಾವೇರಿ: ಬ್ಯಾಡಗಿಯ ಶಿವ ದೇವಸ್ಥಾನದ ಬಳಿ ಹಿಂದೂ ಯುವಕನ ಜೊತೆ ಮಾತನಾಡುತ್ತಾ ನಿಂತಿದ್ದಕ್ಕೆ ಮುಸ್ಲಿಂ ಯುವತಿಯನ್ನು ಮುಸ್ಲಿಂ ಯುವಕರ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ.
ಈ ಘಟನೆ ಹಿನ್ನಲೆ 9 ಮುಸ್ಲಿಂ ಯುವಕರ ಪೈಕಿ 7 ಯುವಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬ್ದುಲ್ ಖಾದರ್, ಮನ್ಸೂರ್, ಮೆಹಬೂಬ್ ಖಾನ್, ರಿಯಾಜ್, ಅಲ್ಪಾಜ್, ಅಬ್ದುಲ್, ಖಾದರ್, ಸಲೀಂಸಾಬ್, ಮೆಹಬೂಬ್ ಅಲಿ ಬಂಧಿತರು ಎಂದು ತಿಳಿದುಬಂದಿದೆ.
ಈ ಕುರಿತು ಸಂತ್ರಸ್ತ ಯುವತಿ ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.