News Karnataka Kannada
Saturday, April 27 2024
ಕ್ರೈಮ್

ಖಡಕ್‌ ಮಹಿಳಾ ಅಧಿಕಾರಿ ಪ್ರತಿಮಾ ಸಾವಿನ ಸುತ್ತ ಅನುಮಾನದ ಹುತ್ತ

Mystery surrounding the death of woman officer Pratima
Photo Credit : News Kannada

ಬೆಂಗಳೂರು: ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾಗಿರುವ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಪ್ರತಿಮಾ ಗಣಿ ಭೂ ವಿಜ್ಞಾನ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಅಲ್ಲದೆ ಖಡಕ್‌ ಅಧಿಕಾರಿಯಾಗಿ ಹೆಸರು ಮಾಡಿದ್ದರು.

ಈ ಭೀಕರ ಕೊಲೆ ಹಿಂದಿನ ಕೈಗಳು ಯಾವುದು ಎಂಬ ಬಗ್ಗೆ ಪೊಲೀಸ್‌ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಪ್ರತಿಮಾ ಅವರನ್ನು ಕತ್ತು ಹಿಸುಕಿ ನಂತರ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಆದರೆ, ಕೊಲೆ ಆರೋಪಿಗಳು ಯಾರು? ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಮಾತ್ರ ತಿಳಿದು ಬಂದಿಲ್ಲ. ಈ ನಡುವೆ ಪ್ರತಿಮಾರನ್ನು ನಿನ್ನೆ ಸಂಜೆ ಕಚೇರಿಯಿಂದ ಕರೆದುಕೊಂಡು ಬಂದ ಕಾರು ಚಾಲಕ ಇದುವರೆಗೂ ಪತ್ತೆಯಾಗಿಲ್ಲ, ಆತನ ಮೇಲೂ ಕೂಡ ಇದೀಗ ಅನುಮಾನ ವ್ಯಕ್ತವಾಗಿದೆ.

ಪ್ರತಿಮಾ ಸಹೋದರ ಗುತ್ತಿಗೆದಾರ: ಬನ್ನೇರುಘಟ್ಟ ರೋಡ್ ಬಳಿ ವಾಸವಾಗಿರುವ ಪ್ರತಿಮಾ ಸಹೋದರ ಪ್ರತೀಶ್, ಬಿಬಿಎಂಪಿಯಲ್ಲಿ ಗುತ್ತಿಗೆದಾರನಾಗಿದ್ದಾನೆ. ನಿನ್ನೆ ರಾತ್ರಿ ಪ್ರತಿಮಾರಿಗೆ ಕರೆ ಮಾಡಿದರೂ ಕಾಲ್ ರಿಸೀವ್ ಮಾಡದಿದ್ದಾಗ, ಕೆಲಸದಿಂದ ಸುಸ್ತಾಗಿರಬಹುದು ಎಂದು ಸುಮ್ಮನಾಗಿದ್ದನು. ಮತ್ತೆ ಬೆಳಗ್ಗೆ ಪೋನ್ ಮಾಡಿದ್ದು,ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಕೆಳಗಡೆ ವಾಸವಿದ್ದ ಮನೆಯವರಿಗೆ ತಿಳಿಸಿ ನೋಡಲು ಹೇಳಿದಾಗ, ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಯಾಗಿರುವ ಪ್ರತಿಮಾ ದಂಪತಿ ಅನೋನ್ಯವಾಗಿದ್ದರು. ಕಳೆದ ತಿಂಗಳು 22 ಮತ್ತು 23 ರಂದು ಪ್ರತಿಮಾ ಮನೆ ಗೃಹಪ್ರವೇಶ ನೆರವೇರಿಸಿದ್ದರು. ಈ ವೇಳೆ ಒಂದು ವಾರಗಳ ಕಾಲ ಪ್ರತಿಮಾ ತೀರ್ಥಹಳ್ಳಿಯಲ್ಲಿಯೇ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು