ಉಡುಪಿ: ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗಾಗಿ ಗುರುವಾರ ನೇಜಾರಿನ ಕೊಲೆ ನಡೆದ ಸ್ಥಳಕ್ಕೆ ಕರೆತರಲಾಗಿತ್ತು.
ಮಹಜರು ಬಳಿಕ ಆರೋಪಿಯನ್ನು ಹಿಂದಕ್ಕೆ ಕರೆದುಕೊಂಡು ಹೋಗುವ ವೇಳೆ ಉದ್ರಿಕ್ತ ಗುಂಪು ಪೊಲೀಸ್ ವಾಹನದತ್ತ ನುಗ್ಗಿ ಆರೋಪಿಗೆ ಹಲ್ಲೆ ನಡೆಸಲು ಯತ್ನಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಆಕ್ರೋಶಿತ ಗುಂಪನ್ನು ಚದುರಿಸಿದ್ದಾರೆ.
ಈ ಸಂದರ್ಭ ಆರೋಪಿಯನ್ನು ಗಲ್ಲಿಗೇರಿಸಿ ಎಂದು ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಡಿವೈಎಸ್ಪಿ ದಿನಕರ ನೇತೃತ್ವದಲ್ಲಿ ಸ್ಥಳ ಮಹಜರಿಗೆ ಆಗಮಿಸಿದ್ದು, ಈ ಸಂದರ್ಭ ಬೆಳಗ್ಗಿನಿಂದ ಕಾಯುತ್ತಿದ್ದ ಆಕ್ರೋಶಿತ ಗುಂಪು ಆರೋಪಿ ಮೇಲೆ ದಾಳಿಗೆ ಯತ್ನಿಸಿದಾಗ ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಲಾಗಿದೆ.