Categories: ಕ್ರೈಮ್

ಬಾಯ್‌ಫ್ರೆಂಡ್‌ ಮೊಬೈಲ್‌ನಲ್ಲಿ 13 ಸಾವಿರ ಯುವತಿಯರ ನಗ್ನ ಫೋಟೋ ಪತ್ತೆ

ಬೆಂಗಳೂರು: ಬೆಳ್ಳಂದೂರಲ್ಲಿರುವ ಬಿಪಿಒ ಕಂಪನಿಯೊಂದರ ಉದ್ಯೋಗಿಯಾಗಿ ಕೆಲಸ ಮಾಡುತ್ತಿರುವ 22 ಪ್ರಾಯದ ಯುವತಿ ತಾವು ಸಂಬಂಧ ಹೊಂದಿದ್ದ ಸಹೋದ್ಯೋಗಿಯ ಫೋನ್ ಗ್ಯಾಲರಿಯಲ್ಲಿ ತನ್ನದೂ ಸೇರಿದಂತೆ ತನ್ನದೇ ಕಂಪನಿಯ ಮಹಿಳಾ ಸಹೋದ್ಯೋಗಿಗಳು ಹಾಗೂ ಇತರೆ ಮಹಿಳೆಯರದ್ದೂ ಸೇರಿದಂತೆ 13,000 ನಗ್ನ ಫೋಟೋಗಳನ್ನು ನೋಡಿ ಶಾಕ್‌ಗೆ ಒಳಗಾಗಿದ್ದಾಳೆ.

ಬೆಳ್ಳಂದೂರಿನಲ್ಲಿರುವ ಬಿಪಿಒದ ಕಾನೂನು ಮುಖ್ಯಸ್ಥೆ ಅರ್ಚನಾ (ಹೆಸರು ಬದಲಾಯಿಸಲಾಗಿದೆ) ಅವರು ಆದಿತ್ಯ ಸಂತೋಷ್ (25) ವಿರುದ್ಧ ನವೆಂಬರ್ 23 ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತೋಷ್ ಮತ್ತುಅರ್ಚನಾ ನಾಲ್ಕು ತಿಂಗಳಿನಿಂದ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ.

ಇವರು ತಮ್ಮ ಆತ್ಮೀಯ ಕ್ಷಣಗಳನ್ನು ಫೋಟೋ ಹಾಗೂ ವಿಡಿಯೋ ತೆಗೆದುಕೊಂಡು ಇಟ್ಟುಕೊಂಡಿದ್ದರು. ಆದರೆ, ಮುಂದಿನ ಭವಿಷ್ಯದ ಬಗ್ಗೆ ಚಿಂತೆ ಮಾಡಿದ ತನ್ವಿ ತಮ್ಮ ಖಾಸಗಿ ಕ್ಷಣಗಳ ಫೋಟೋ, ವಿಡಿಯೋವನ್ನು ಡಿಲೀಟ್ ಮಾಡಬೇಕೆಂದು ತನ್ನ ಬಾಯ್‌ಫ್ರೆಂಡ್‌ ಸಂತೋಷ್ ಗೆ ತಿಳಿಯದಂತೆ ಅವನ ಫೋನ್ ತೆಗೆದುಕೊಂಡು ಗ್ಯಾಲರಿ ತೆಗೆದು ನೋಡಿದ್ದಾಳೆ. ಕೆಲವು ಫೋಟೋಗಳನ್ನು ತಿರುಚಿದ ಬಗ್ಗೆ ತನ್ವಿಗೆ ಕಂಡು ಬಂದಿದೆ.

ನಂತರ ತನ್ನದೂ ಸೇರಿದಂತೆ ಇತರೆ ಮಹಿಳಾ ಸಹೋದ್ಯೋಗಿಗಳು ಹಾಗೂ ಬೇರೆ ಬೇರೆ ಯುವತಿಯರ ನಗ್ನ ಫೋಟೋಗಳನ್ನು ನೋಡಿ ಬೆರಗಾಗಿದ್ದಾರೆ.

ಇನ್ನು ಕಂಪನಿಯಲ್ಲಿ ಕೆಲಸ ಮಾಡುವ ಇತರ ಮಹಿಳೆಯರ ಸುರಕ್ಷತೆಯನ್ನು ಪರಿಗಣಿಸಿ, ಇಂಡಿಯಾ ರೀಜನ್ ಮುಖ್ಯಸ್ಥರು ಅರ್ಚನಾ ಅವರಿಗೆ ತಕ್ಷಣ ಪೊಲೀಸರಿಗೆ ದೂರು ನೀಡುವಂತೆ ಮನವಿ ಮಾಡಿದರು. ನಂತರ ಈ ಕುರಿತು ಸೈಬರ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago