News Karnataka Kannada
Sunday, May 05 2024
ಕ್ರೈಮ್

ದರೋಡೆ ಪ್ರಕರಣ: ಪ್ರಮುಖ ಆರೋಪಿಯನ್ನು ಪುತ್ತೂರಿಗೆ ಕರೆತಂದ ಪೊಲೀಸರು

Robbery case: Police bring main accused to Puttur
Photo Credit : News Kannada

ಪುತ್ತೂರು: ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರಿಗೆ ಕರೆತರಲಾಗಿದೆ.

ಸೆಪ್ಟೆಂಬರ್ 6 ರಂದು ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ಗುರುಪ್ರಸಾದ್ ಎಂಬವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿತ್ತು.

ಪ್ರಕರಣದ ಪ್ರಮುಖ ಆರೋಪಿ ರವಿ ಯಾನೆ ಪಚ್ಚಂಬಳ ರವಿ ಜೈಲಿನಿಂದ ಪೆರೋಲ್ ಮೂಲಕ ಬಂದು ಕಳ್ಳತನ ನಡೆಸುತ್ತಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಬಂಧಿಸಿರುವ ಪೋಲೀಸರು ಇದೀಗ ಕಣ್ಣೂರು ಸೆಂಟ್ರಲ್ ಜೈಲ್ ನಲ್ಲಿದ್ದ ಪ್ರಮುಖ ಆರೋಪಿ ರವಿಯನ್ನು ಪುತ್ತೂರಿಗೆ ಕರೆತಂದಿದ್ದಾರೆ.

ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಜಬ್ಬಾರ್ ಕೊಲೆ ಆರೋಪಿಯಾಗಿರುವ ರವಿ ಪಚ್ಚಂಬಳ ಕಣ್ಣೂರು ಸೆಂಟ್ರಲ್ ಜೈಲ್ ನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು