ಮಂಗಳೂರು: ದುಬೈನಿಂದ ಬಂದ ಇಬ್ಬರು ಪ್ರಯಾಣಿಕರಿಂದ 11. 44 ಲಕ್ಷ ರೂ.ಮೌಲ್ಯದ ಕಳ್ಳಸಾಗಾಣಿಕೆ ಮಾಡಲಾಗುತ್ತಿದ್ದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಹಿಳಾ ಹಾಗೂ ಪುರುಷ ಪ್ರಯಾಣಿಕರಿಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನಕ್ಕೆ ಅ.17 ರಂದು ಬಂದಿಳಿದಿದ್ದಾರೆ. ಈ ವೇಳೆ ಪುರುಷ ಪ್ರಯಾಣಿಕ ಮಾಸ್ಕ್ ಧರಿಸಿದ್ದು, ಆತನ ಕೆನ್ನೆ ಭಾಗದಲ್ಲಿ ಅಸಹಜತೆ ಕಂಡು ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸಿದಾಗ ಎರಡು ಚಿನ್ನದ ತುಂಡುಗಳನ್ನು ತನ್ನ ಬಾಯಿಯಲ್ಲಿ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ.
ಇನ್ನು ಮಹಿಳಾ ಪ್ರಯಾಣಿಕಳು ತಲೆಕೂದಲಿಗೆ ಹಾಕಿಕೊಂಡಿದ್ದ ಬ್ಯಾಂಡ್ ಪರಿಶೀಲಿಸಿದಾಗ ರೋಡಿಯಮ್ ಲೇಪಿತ ಮಣಿಗಳಂತೆ ಹೇರ್ ಬ್ಯಾಂಡ್ ಕಂಡು ಬಂದಿದ್ದು ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ. ಎರಡು ಪ್ರಕರಣಗಳಲ್ಲಿ, 24 ಕ್ಯಾರೆಟ್ನ ಚಿನ್ನವು ಸಂಪೂರ್ಣವಾಗಿ ತೂಗುತ್ತದೆ.
ಈ ಇಬ್ಬರು ಪ್ರಯಾಣಿಕರಿಂದ 1,44,090 ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 191 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…
ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…
ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್…
ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…