ಶಿರೂರು: ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ವೇಳೆ ಅಸ್ವಸ್ಥಗೊಂಡು ಸಮುದ್ರಕ್ಕೆ ಬಿದ್ದ ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜ.31ರಂದು ಶಿರೂರು ಅಳ್ವೆಗದ್ದೆ ಎಂಬಲ್ಲಿ ನಡೆದಿದೆ.
ಮೃತರನ್ನು ಶಿರೂರಿನ ವೆಂಕಟರಮಣ(65) ಎಂದು ಗುರುತಿಸಲಾಗಿದೆ.
ಇವರು ಪಾತಿ ದೋಣಿಯಲ್ಲಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರೆಳಿದ್ದರು. ಮೀನುಗಾರಿಕೆ ಮುಗಿಸಿ ವಾಪಾಸು ದಡಕ್ಕೆ ಬರುತ್ತಿದ್ದಾಗ 20 ಮೀಟರ್ ಅಂತರದಲ್ಲಿ ಅಸ್ವಸ್ಥಗೊಂಡು ಸಮುದ್ರಕ್ಕೆ ಬಿದ್ದಿದ್ದರು ಎನ್ನಲಾಗಿದೆ.
ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.