ಧಾರವಾಡ: ಅನೈತಿಕ ಸಂಬಂಧಕ್ಕೆ ತನ್ನ ಮಗಳು ಅಡ್ಡಿಯಾಗಿದ್ದಾಳೆಂದು ತಿಳಿದು ತಾಯಿಯೋರ್ವಳು ತನ್ನ ಐದು ವರ್ಷದ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡದ ಕಮಲಾಪುರದಲ್ಲಿ ನಡೆದಿದೆ.
ಕಮಲಾಪುರದ ಹೂಗಾರ ಓಣಿಯಲ್ಲಿ ಈ ಘಟನೆ ನಡೆದಿದೆ. ಜ್ಯೋತಿ ಹಿರೇಮಠ ಎಂಬಾಕೆ ರಾಹುಲ್ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ಸಂಬಂಧಕ್ಕೆ ತನ್ನ ಐದು ವರ್ಷದ ಸಹನಾ ಹಿರೇಮಠ ಎಂಬ ಅಂಗವಿಕಲ ಹೆಣ್ಣು ಮಗು ಅಡ್ಡಿಯಾಗುತ್ತಿದೆ ಎಂದು ಜ್ಯೋತಿ ತಾನು ಹೆತ್ತ ಮಗುವನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ರಾಹುಲ್ ಎಂಬಾತ ಜ್ಯೋತಿ ಮನೆಗೆ ಬಂದಾಗ ಐದು ವರ್ಷದ ಹೆಣ್ಣು ಮಗು ಕಿರಿಕಿರಿಯುಂಟು ಮಾಡಿತೆಂದು ಜ್ಯೋತಿ ತಾನು ಹೆತ್ತ ಮಗುವನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಜ್ಯೋತಿ ಹಾಗೂ ರಾಹುಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.