News Karnataka Kannada
Monday, April 29 2024
ಕ್ರೈಮ್

ನೈನಿತಾಲ್ ಬಳಿ ಕಂದಕಕ್ಕೆ ಉರುಳಿದ ಬಸ್ : ಆರು ಮಂದಿ ದುರ್ಮರಣ

Six killed as bus falls into gorge near Nainital
Photo Credit : IANS

ಉತ್ತರಾಖಂಡ: ನೈನಿತಾಲ್‌ನಲ್ಲಿ ಕಂದಕಕ್ಕೆ ಬಸ್ ಉರುಳಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

33 ಜನರಿದ್ದ ಬಸ್ ಹರಿಯಾಣದಿಂದ ಹಿಸಾರ್‌ಗೆ ಬರುತ್ತಿತ್ತು. ಈ ವೇಳೆ ನೈನಿತಾಲ್‌ನ ಕಲಾಧುಂಗಿ ವೇಳೆ ಬಸ್ ಏಕಾಏಕಿ ಕಂದಕಕ್ಕೆ ಉರುಳಿಬಿದ್ದಿದೆ. ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಉಳಿದವರು ಗಾಯಗೊಂಡಿದ್ದಾರೆ.

ಸ್ಥಳೀಯ ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಮಾತನಾಡಿದ್ದು, ಕಮರಿಗೆ ಬಸ್ ಉರುಳಿಬಿದ್ದು ಆರು ಮಂದಿ ಮೃತಪಟ್ಟಿದ್ದಾರೆ, 27ಮಂದಿ ಗಾಯಗೊಂಡಿದ್ದಾರೆ. ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ ಗಾಯಗೊಂಡವರ ಆರೈಕೆ ಮಾಡಲಾಗುತ್ತಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು