ಚೆನ್ನೈ: ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಒಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ತೀರಿಸಿಕೊಂಡಿದ್ದಾನೆ.
ಅ ವ್ಯಕ್ತಿಯನ್ನು ಬುಬಾಲನ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ನಗರದ ಡಿ ಅಡಿಕ್ಷನ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ನಡೆಯುವ ಎರಡು ದಿನಗಳ ಹಿಂದಷ್ಟೇ ಅಲ್ಲಿಂದ ಬಿಡುಗಡೆಗೊಂಡಿರುವುದು ಪೊಲೀಸರಿಗೆ ತನಿಖೆಯ ವೇಳೆ ತಿಳಿದು ಬಂದಿದೆ.
ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್ನಲ್ಲಿ ನಿಲ್ಲಿಸಲಾಗಿತ್ತು ಮತ್ತು ಆ ವ್ಯಕ್ತಿಯ ಮನೆ ಆ ಶೋರೂಮ್ ಬಳಿ ಇತ್ತು.
ಸೋಮವಾರ ಬೆಳಗ್ಗೆ ವಾಹನಗಳ ಇಂತಹ ಸ್ಥಿತಿ ಕಂಡು ಶೋರೂಂ ಮಾಲೀಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರದೇಶದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ಆರಂಭಿಸಿದ್ದು, ವ್ಯಕ್ತಿಯ ವಿಕೃತಿ ಮೆರೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ನನ್ನ ಹೆಂಡತಿ ನನಗೆ ಮೋಸ ಮಾಡುತ್ತಿದ್ದಾಳೆ ಎಂಬ ಅನುಮಾನದಿಂದ ಆ ದಿನ ಹೆಂಡತಿಯೊಂದಿಗೆ ಜಗಳವಾಡಿದ್ದನು. ಈ ವಿಚಾರವಾಗಿ ಆಕೆಯನ್ನು ಪ್ರಶ್ನಿಸಿದಾಗ ಆಕೆ ನನ್ನೊಂದಿಗೆ ಜಗಳವಾಡಿದಳು. ಇದರಿಂದ ಕೋಪಗೊಂಡು ಹೊರಗೆ ನಿಲ್ಲಿಸಿದ್ದ ಎಲ್ಲಾ ವಾಹನಗಳನ್ನು ಒಡೆದು ಹಾಕಿದೆ ಎಂದು ಹೇಳಿಕೊಂಡಿದ್ದಾನೆ.