Categories: ಕ್ರೈಮ್

ಬೇಲೂರು: ಕುಡಿದ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

ಬೇಲೂರು: ಅಳಿಯನೊಬ್ಬ ಕುಡಿದ ಮತ್ತಿನಲ್ಲಿ ಮಾವನೊಂದಿಗೆ ಜಗಳ ತೆಗೆದು ಹಲ್ಲೆ ಮಾಡಿದ ಪರಿಣಾಮ ಸಾವನ್ನಪ್ಪಿದ ಘಟನೆ ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ತಮ್ಮಯ್ಯ (58) ಕೊಲೆಯಾದ ದುರ್ದೈವಿ. ಅಳಿಯ ಬಲ್ಲೇನಹಳ್ಳಿ ಗ್ರಾಮದ ಜಗದೀಶ್ ಎಂಬಾತನೇ ಹಲ್ಲೆ  ಮಾಡಿ ಹತ್ಯೆಗೈದ ಆರೋಪಿ. ತಮ್ಮಯ್ಯ ಅವರು ಮಗಳು ಲತಾಳನ್ನು ತಮ್ಮ ಪಕ್ಕದ ಗ್ರಾಮದ ಬಲ್ಲೇನಹಳ್ಳಿ ಗ್ರಾಮದ ಜಗದೀಶ್ ಎಂಬುವರಿಗೆ ಸುಮಾರು 25 ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದರು.

ಕುಡಿತದ ದಾಸನಾಗಿದ್ದ ಜಗದೀಶ್ ಪ್ರತಿನಿತ್ಯ ಕುಡಿದು ಹೆಂಡತಿ ಮಕ್ಕಳಿಗೆ ಹೊಡೆಯುತ್ತಿದ್ದ ಹಿನ್ನಲೆಯಲ್ಲಿ ತನ್ನ  ತವರು ಮನೆಯಲ್ಲಿಯೇ ಲತಾ ತನ್ನ ಮಕ್ಕಳನ್ನು ಓದಿಸಿಕೊಂಡು ಇಲ್ಲಿನ ಅಂಗನವಾಡಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪ್ರತಿನಿತ್ಯ ಊರಿಗೆ ಬಂದು ಜಗಳವಾಡುತ್ತಿದ್ದ ಇವನ ಮೇಲೆ ಹಲವಾರು ಬಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಗುರುವಾರ ಮಧ್ಯಾಹ್ನ ಎಂದಿನಂತೆ ತನ್ನ ದನ ಕುರಿಗಳನ್ನು ಮೇಯಲು ಬಿಟ್ಟು ಪಕ್ಕದ ಶಾಲೆಯ ಕಟ್ಟೆಯ ಮೇಲೆ ಮಲಗಿದ್ದ ತಮ್ಮಯ್ಯನವರನ್ನು ಕಂಠಪೂರ್ತಿ ಕುಡಿದು ಬಂದ ಜಗದೀಶ್ ತಮ್ಮಯ್ಯನವರ ಜೊತೆ ಜಗಳವಾಡಿ ಹಲ್ಲೆ ಮಾಡಿ ಬಿಟ್ಟು ಓಡಿಹೋಗಿದ್ದಾನೆ. ಅಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಿದ ನಂತರ ಅವನು ಸಹ ಆಸ್ಪತ್ರೆ ಬಳಿ ಇದ್ದು ತನ್ನ ಮಾವನಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಜೊತೆ ಸುಳ್ಳಿನ ನಾಟಕವಾಡಿದ್ದಾನೆ. ನಂತರ ತಮ್ಮಯ್ಯನವರನ್ನು ವೈದ್ಯರು ಹಾಗೂ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ ಆಸ್ಪತ್ರೆಗೆ ಬರುವ ಮುಂಚೆಯೇ ತಮ್ಮಯ್ಯ ಮೃತಪಟ್ಟಿದ್ದಾರೆ ಎಂಬುದನ್ನು ದೃಢಪಡಿಸಿದರು.

ವಿಷಯ ತಿಳಿದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಸ್ಪತ್ರೆಯ ಬಳಿ ಜಮಾಯಿಸಿದಾಗ ನಾಟಕವಾಡಿದ ಜಗದೀಶ್ ಮಾವನಿಗೆ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆತಂದು ಬಿಟ್ಟಿದ್ದೇನೆ ಎಂದು ಅಲ್ಲಿಂದ ಓಡಿಹೋಗಲು ಯತ್ನಿಸಿದ್ದಾಗ ಸಾರ್ವಜನಿಕರು ಹಾಗೂ ಪೊಲೀಸರ ಸಹಕಾರದಿಂದ ಅರೋಪಿಯನ್ನು ಬಂಧಿಸಿ ಪೊಲಿಸ್ ಠಾಣೆಗೆ ಒಪ್ಪಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಜಯರಾಂ ಹಾಗೂ ಪಿಎಸ್ ಐ ಪ್ರವೀಣ್ ಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ashika S

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

8 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

29 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

56 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago