News Karnataka Kannada
Sunday, May 05 2024
ಕ್ರೈಮ್

ಅತಿಯಾಗಿ ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಕಾಸರಗೋಡು: ಮೊಬೈಲ್‌ ಗೀಳು ಅಂಟಿಸಿಕೊಂಡಿದ್ದ ಮಗನನ್ನು ಪ್ರಶ್ನೆ ಮಾಡಿದ ತಾಯಿಯನ್ನೇ ಮಗ ಹತ್ಯೆ ಮಾಡಿದ ಭೀಕರ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಣಿಚಿರ ನಿವಾಸಿ ರುಕ್ಮಿಣಿ ಅವರ ಪುತ್ರ ಸುಜಿತ್‌ ಅತಿಯಾಗಿ ಮೊಬೈಲ್‌ ಬಳಕೆ ಮಾಡುತ್ತಿದ್ದ. ಈ ಬಗ್ಗೆ ತಾಯಿ ಆಕ್ಷೇಪ ವ್ಯಕ್ತಪಡಿಸಿ ಅತಿಯಾಗಿ ಮೊಬೈಲ್‌ ಬಳಸುವುದು ಒಳ್ಳೆಯದಲ್ಲ ಎಂದು ಬುದ್ಧಿಮಾತು ಹೇಳಿದ್ದರು. ಇದರಿಂದ ಕುಪಿತನಾದ ಪುತ್ರ ಸುಜಿತ್‌ ತಾಯಿಯ ತಲೆಯನ್ನು ಗೋಡೆಗೆ ಒತ್ತಿ ಹಿಡಿದು ಗಂಭೀರ ಹಲ್ಲೆ ನಡೆಸಿದ್ದ. ಗಾಯಗೊಂಡಿದ್ದ ತಾಯಿ ರುಕ್ಮಿಣಿ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರಕರಣ ನಡೆದ ಬಳಿಕ ಸುಜಿತ್‌ ನನ್ನು ಪೊಲೀಸರು ಬಂಧಿಸಿದ್ದು ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಆತನನ್ನು ಕೋಯಿಕ್ಕೋಡ್‌ ಸರ್ಕಾರಿ ಮಾನಸಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು