ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೂಚಾವರಂನಲ್ಲಿ ಪುತ್ರನೊಬ್ಬ ತನಗೆ ಮದುವೆ ಮಾಡಿಸುತ್ತಿಲ್ಲ ಎಂದು ತಾಯಿಯನ್ನೇ ಕೊಂದು ಹಾಕಿದ ಘಟನೆ ನಡೆದಿದೆ.
ಅನಿಲ್ ಎಂಬಾತನೇ ತನ್ನ ತಾಯಿ ಶೋಭಾ (45) ಎಂಬವರನ್ನು ಕೊಲೆ ಮಾಡಿದ ಮಗ.
ಅನಿಲ್ ಸುಮಾರು 25 ವರ್ಷದ ಯುವಕನಾಗಿದ್ದು ಕುಡಿತದ ದಾಸನಾಗಿದ್ದ. ಸರಿಯಾಗಿ ಕೆಲಸ ಮಾಡದೆ ತಾಯಿಯ ಕೈಯಿಂದಲೇ ಹಣವನ್ನು ಕಿತ್ತುಕೊಂಡು ಹೋಗಿ ಸರಾಯಿ ಸುರಿಯುತ್ತಿದ್ದ. ಈ ನಡುವೆ ತಾಯಿ ತನಗೆ ಮದುವೆ ಮಾಡಿಸುತ್ತಿಲ್ಲ ಎಂದು ಹಂಗಿಸುತ್ತಿದ್ದ.
ಭಾನುವಾರ ರಾತ್ರಿ ಇದೇ ವಿಚಾರದಲ್ಲಿ ತಾಯಿ ಮತ್ತು ಮಗನ ನಡುವೆ ಜಗಳವಾಗಿ, ಕುಡಿದ ನಶೆಯಲ್ಲಿ ತಾಯಿಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಕುಂಚಾವರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಲ್ಲದೆ, ಕೊಲೆ ಮಾಡಿದ ಅನಿಲ್ನನ್ನು ವಶಕ್ಕೆ ಪಡೆದಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…