ನವದೆಹಲಿ: ಶಹದಾರದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಸಾಸ್ ವಿಚಾರಕ್ಕೆ ಹಲ್ಲೆ ಮಾಡಿದ ಘಟನೆ ನಡೆದಿದೆ.
ಸಂದೀಪ್ (34ವರ್ಷ) ಅವರು ಸಂಜೆ ರಸ್ತೆಬದಿ ಮಾರುತ್ತಿರುವ ಗಾಡಿಯಿಂದ ಮೋಮೊಗಳನ್ನು ಖರೀದಿಸಲು ಹೋಗಿದ್ದರು. ಹೀಗೆ ಮೋಮೊಸ್ ಖರೀದಿಸಿದ ಬಳಿಕ ಗಾಡಿ ಮಾಲೀಕ ವಿಕಾಸ್ (22) ಬಳಿ ಹೆಚ್ಚಿನ ರೆಡ್ ಸಾಸ್ ನೀಡುವಂತೆ ಕೇಳಿದ್ದಾನೆ. ಆದರೆ ಆತ ಕಡಿಮೆ ಇದೆ ಎಂದು ಹೇಳಿ ಕೊಡಲು ನಿರಾಕರಿಸಿದ್ದಾನೆ. ಇದಾದ ಕೆಲವೇ ದಿನಗಳಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು. ಮಾತಿಗೆ ಮಾತು ಬೆಳೆದು ವಿಕಾಸ್, ಗ್ರಾಹಕ ಸಂದೀಪ್ ಮುಖಕ್ಕೆ ಎರಡು ಬಾರಿ ಇರಿದು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಕೊಲೆ ಯತ್ನದಡಿ ಗಾಡಿ ಮಾಲೀಕ ವಿಕಾಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸದ್ಯ ಸಂದೀಪ್ ಮುಖಕ್ಕೆ ಗಂಭೀರ ಗಾಯಗಳಾಗಿದ್ದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.