News Karnataka Kannada
Wednesday, May 01 2024
ಕ್ರೈಮ್

ವಂದೇ ಭಾರತ್‌ ಎಕ್ಸ್‌ಪ್ರೆಸ್ ಮೇಲೆ ಮತ್ತೆ ಕಲ್ಲು ತೂರಾಟ

Stone pelting on Vande Bharat again
Photo Credit : News Kannada

ರಾಜ್‌ಕೋಟ್‌: ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ಎಸೆಯುವ ಘಟನೆಗಳು ಆಗಾಗ್ಗೆ ನಡೆಯುತ್ತಿವೆ. ಇದೀಗ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಅಹಮದಾಬಾದ್‌ನಿಂದ ರಾಜ್‌ಕೋಟ್‌ಗೆ ಗುಜರಾತ್‌ನ ಸಚಿವರೊಬ್ಬರು ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲೂ ತೂರಾಟ ನಡೆದಿದೆ.

ಗುಜರಾತಿನ ಸಾರಿಗೆ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ ವಂದೇ ಭಾರತ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ರೈಲಿನ ಗಾಜಿಗೆ ಹಾನಿಯಾಗಿದೆ. ಅವರು ಗುರುವಾರ ರಾತ್ರಿ ರೈಲಿನಲ್ಲಿ ಅಹಮದಾಬಾದ್‌ನಿಂದ ರಾಜ್‌ಕೋಟ್‌ಗೆ ಪ್ರಯಾಣಿಸುತ್ತಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರಾಜ್‌ಕೋಟ್‌ನ ಬಿಲೇಶ್ವರ್ ರೈಲು ನಿಲ್ದಾಣದ ಬಳಿ ಈ ಘಟನೆ ವರದಿಯಾಗಿದೆ. ಸಾಂಘ್ವಿ ಇ1 ಕೋಚ್‌ನಲ್ಲಿದ್ದರು.

ಪೊಲೀಸರ ಪ್ರಕಾರ, ಕೋಚ್‌ನಲ್ಲಿದ್ದ ರೈಲು ಪ್ರಯಾಣಿಕರು, ಸ್ಥಳೀಯರು ಮತ್ತು ಹತ್ತಿರದ ಗ್ರಾಮದ ಸರಪಂಚ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನೀಡಿರುವ ಪೊಲೀಸರು, ರೈಲಿನ ಕಿಟಕಿಗಳಿಗೆ ಫೈಬರ್ ಬಲವರ್ಧಿತ ಗಾಜಿನಿಂದ ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ. ಇದೇ ಕಾರಣಕ್ಕೆ ಕಿಟಕಿಗೆ ಕಲ್ಲು ತಗುಲಿದಾಗ ಗಾಜು ಬಿರುಕು ಬಿಟ್ಟರೂ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು