News Karnataka Kannada
Sunday, May 05 2024
ಕ್ರೈಮ್

‘ಸುಪ್ರೀಂ’ ವಕೀಲೆಯ ಬರ್ಬರ ಹತ್ಯೆ: 36 ಗಂಟೆ ಮನೆಯಲ್ಲೇ ಅಡಗಿ ಕುಳಿತಿದ್ದ ಪತಿ!

Supreme Court lawyer's brutal murder: Man hides in house for 36 hours
Photo Credit : IANS

ನವದೆಹಲಿ: ಸುಪ್ರೀಂಕೋರ್ಟ್ ವಕೀಲೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಪತಿ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು ಸಿನ್ಹಾ (61) ಎಂದು ಗುರುತಿಸಲಾಗಿದೆ.

ರೇಣು ಸಿನ್ಹಾ ತನ್ನ ಸಹೋದರನ ಕರೆಗಳಿಗೆ ಸ್ಪಂದಿಸದ ಹಿನ್ನೆಲೆ ಆತಂಕಗೊಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು, ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬಂಗಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸ್ ಮಾಹಿತಿ ಪ್ರಕಾರ, ಬಂಗಲೆಯನ್ನು ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಪ್ರವೇಶ ಮಾಡಿದಾಗ ರೇಣು ಸಿನ್ಹಾ ಶವ ಬಾತ್ ರೂಂನಲ್ಲಿ ಬಿದ್ದಿತ್ತು. ಹತ್ಯೆ ಮಾಡಿದ ಆರೋಪಿ ಅಜಯ್ ನಾಥ್ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಅವರನ್ನು ಬಂಧಿಸಲಾಗಿದೆ. ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಸಹೋದರ ಬಹಿರಂಗಪಡಿಸಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು