News Karnataka Kannada
Friday, May 10 2024
ಕ್ರೈಮ್

ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯಾ ಆರೋಪಿ ಸುಳಿವು ಪತ್ತೆ?

The clue of the murder of four members of the same family found in Nejar?
Photo Credit : News Kannada

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯ ಹೆಡೆಮುರಿ ಕಟ್ಟಿದ ಉಡುಪಿ ಡಿವೈಎಸ್‌ಪಿ ದಿನಕರ್ ಪಿ. ನೇತೃತ್ವದ ತಂಡ ಕೇರಳದ ಕೊಟ್ಟಾಯಂನಲ್ಲಿ ವಶಕ್ಕೆ ಪಡೆಯುವ ಸಾಧ್ಯತೆ ಇದೆಂದು ಪೊಲೀಸ್ ಮೂಲಗಳು ಖಚಿತಪಡಿಸಿದೆ. ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಿಸಿಟಿವಿ ಜಾಡು ಹಿಡಿದು ಕೊಲೆಗೈದ ಬಳಿಕ ಹಂತಕ ಸಾಗಿರುವ ವಿವಿಧ ಪ್ರದೇಶಗಳ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದರು.

ಸಂತೆಕಟ್ಟೆಯಿಂದ ಉಡುಪಿ ಕರಾವಳಿ ಬೈಪಾಸ್, ಅಲ್ಲಿಂದ ಅಂಬಲಪಾಡಿ, ಕಿನ್ನಿಮುಲ್ಕಿ, ಬಲಾಯಿಪಾದೆ ಹಾಗೂ ಉದ್ಯಾವರ, ಅಲ್ಲಿಂದ ಕಟಪಾಡಿವರೆಗೆ ಸಾಗಿರುವ ಸಿಸಿಟಿವಿ ಪುಟೇಜ್‌ಗಳ ಜಾಡು ಹಿಡಿದ ಪೊಲೀಸರ ತಂಡವು ಕಾಸರಗೋಡು, ಕೇರಳ ಕಡೆ ತೆರಳಿ ವ್ಯಾಪಕ ಶೋಧ ನಡೆಸಿವೆ. ಹತ್ಯಾ ಆರೋಪಿ ಕೊಲೆಗೈದ ಬಳಿಕ ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿಯ ಪತ್ತೆ ಹಚ್ಚಿದ ಪೊಲೀಸರ ತಂಡವು ಮಂಗಳೂರು, ತಲಪಾಡಿ, ಕಾಸರಗೋಡು, ಕೇರಳ ರಾಜ್ಯಕ್ಕೆ ಹೋಗಿ ವ್ಯಾಪಕ ಶೋಧ ನಡೆಸಿದ್ದು ಕೊಟ್ಟಾಯಂನಲ್ಲಿ ಇರುವ ಮಾಹಿತಿ ಲಭ್ಯವಾಗಿದ್ದು, ಆತನ ಬಂಧಿಸಲು ಪೊಲೀಸರ ತಂಡ ಬಲೆ ಬೀಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು