ಬೆಂಗಳೂರು: ಕರ್ನಾಟಕದ ಮೂವರು ಸಚಿವರು, ಧಾರ್ಮಿಕ ಚಿಂತಕರು ಮತ್ತು ಪ್ರಗತಿಪರ ಚಿಂತಕರು ಮತ್ತು ನಟರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರಗಳು ಬಂದಿವೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನಿಜಗುಣಾನಂದ ಸ್ವಾಮೀಜಿ ನಿಷ್ಕಲ ಮಂಟಪದ ಆಶ್ರಮದ ವಿಳಾಸಕ್ಕೆ ಜೀವ ಬೆದರಿಕೆ ಪತ್ರವನ್ನು ಪೋಸ್ಟ್ ಮಾಡಲಾಗಿದೆ.
ಪತ್ರದಲ್ಲಿ ಪ್ರಗತಿಪರ ಚಿಂತಕರಾದ ಎಸ್.ಜಿ.ಸಿದ್ದರಾಮಯ್ಯ, ಕೆ.ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೊ.ಭಗವಾನ್, ಪ್ರೊ.ಮಹೇಶ್ ಚಂದ್ರ ಗುರು, ಬಿ.ಟಿ. ಲಲಿತಾ ನಾಯಕ್, ದ್ವಾರಕಾನಾಥ್, ದೇವನೂರು ಮಹಾದೇವ, ಬಿ.ಎಲ್. ವೇಣು, ನಟರು ಮತ್ತು ಕಾರ್ಯಕರ್ತರಾದ ಪ್ರಕಾಶ್ ರಾಜ್ ಮತ್ತು ಚೇತನ್ ಅಹಿಂಸ ಅವರ ಹೆಸರು ಉಲ್ಲೇಖಿಸಲಾಗಿದೆ.
ಸೆಪ್ಟೆಂಬರ್ 20 ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಆಶ್ರಮಕ್ಕೆ ಪತ್ರ ಬಂದಿದ್ದು, ಜೀವ ಬೆದರಿಕೆ ಪತ್ರದಲ್ಲಿ ಹೆಸರಿಸಿರುವ ಎಲ್ಲರಿಗೂ ಕೋಮುವಾದಿ ಮುಸ್ಲಿಮರು ಮಾಡುತ್ತಿರುವುದನ್ನು ಪ್ರಶ್ನಿಸಲು ಧೈರ್ಯವಿದೆಯೇ ಎಂದು ಕೇಳಲಾಗಿದೆ. ಅಲ್ಲದೆ ಮುಸ್ಲಿಮರು ಮಾಡುತ್ತಿರುವ ದೇಶವಿರೋಧಿ ಚಟುವಟಿಕೆಗಳ ವಿರುದ್ಧ ಏಕೆ ಧ್ವನಿ ಎತ್ತುವುದಿಲ್ಲ ಎಂದು ಕೇಳಲಾಗಿದೆ.
ಪತ್ರದಲ್ಲಿ ನಿಜಗುಣಾನಂದ ಸ್ವಾಮೀಜಿ ಅವರನ್ನು ಉಲ್ಲೇಖಿಸಿ “2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು, 2023ರಲ್ಲಿ ತಪ್ಪುವುದಿಲ್ಲ. ನಿನ್ನ ಪಾಪದ ಕೊಡ ತುಂಬಿದೆ, ಬೇಗ ನಿನ್ನ ತಿಥಿ ಬಗ್ಗೆ ಭಕ್ತರಿಗೆ ಹೇಳು. ನಮ್ಮ ಧರ್ಮದ ದೇವತೆಗಳನ್ನು ನಿಂದಿಸುವ ನಿನ್ನ ಘೋರ ಹತ್ಯೆ ಆಗುತ್ತೆ. ನಿನ್ನ ಅಂತಿಮ ದಿನಗಳು ಆರಂಭವಾಗಿವೆ. ಇನ್ನು ದಿನಗಳನ್ನು ಎಣಿಸು” ನೀನು ಮನುಷ್ಯನ ರೂಪದಲ್ಲಿರುವ ರಾಕ್ಷಸ. ಹಿಂದೂ ದೇವತೆಗಳನ್ನು ನಿಂದಿಸುವ ರಾಕ್ಷಸ ನೀನು. ನೀವು ಜೀವನದ ಕೊನೆಯ ಘಟ್ಟದಲ್ಲಿದ್ದೀ. ನಿನ್ನನ್ನು ಮುಗಿಸದೆ ಬೇರೆ ದಾರಿಯಿಲ್ಲ,” ಎಂದು ತಿಳಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಹಿಂದೂ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ನನ್ನು ಸಾಹಿತಿಗಳಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಬಂಧಿಸಲಾಗಿದ್ದು ಆತನೆ ಈ ಪತ್ರ ಬರೆದಿದ್ದನೇ ಎಂಬುದನ್ನು ಪೊಲೀಸರು ಸ್ಪಷ್ಟ ಪಡಿಸಿಲ್ಲ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…