News Karnataka Kannada
Sunday, April 28 2024
ಕ್ರೈಮ್

ಕೊಡಗಿನಲ್ಲಿ ಬೆಚ್ಚಿ ಬೀಳಿಸಿದೆ ಮೂವರ ನಿಗೂಢ ಸಾವು

Three mysterious deaths in Kodagu
Photo Credit : News Kannada

ಪೊನ್ನಂಪೇಟೆ: ತಾಲೂಕು ಹುದಿಕೇರಿ ಹುಬ್ಬಳ್ಳಿಯ ಹೈಸೂಡಳುರು ಗ್ರಾಮದ ಐಗುಂದ ಬಳಿ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.

ಹುದಿಕೇರಿಯಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸೇವಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶ್ವಿನಿ (48) ಇಬ್ಬರು ಹೆಣ್ಣು ಮಕ್ಕಳಾದ ನಿಕಿತಾ(21) ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ, ಅಕೆಯ ತಂಗಿ ನವ್ಯ(18) ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದಳು. ಮೂವರ ಶವ ಇಂದು ಕೂಟಿಯಲ ಹೊಳೆಯಲ್ಲಿ ಪತ್ತೆಯಾಗಿದೆ.

ಮೂಲತಹ ಮಾದಾಪುರ ಗ್ರಾಮದ ನಿವಾಸಿಯಾದ ಅಶ್ವಿನಿ ಕಳೆದ ಆರು ವರ್ಷಗಳಿಂದ ಹುದಿಕೇರಿಯಲ್ಲೇ ಸೇವಾ ನಿರತ ಪ್ರತಿನಿಧಿಯಾಗಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸೇವೆ ಸಲ್ಲಿಸುತ್ತಿದ್ದಳು. ಹುದಿಕೇರಿಯಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇವರು ಹೈಸುಡ್ಲೂರು ಬಳಿಯ ಐಗುಂದದಲ್ಲಿ ಒಂದು ಎಕರೆ ಕಾಫಿ ತೋಟವನ್ನು ಕೂಡ ಹೊಂದಿದ್ದರು. ನಿನ್ನೆ ಮಧ್ಯಾಹ್ನ ತಮ್ಮ ಸ್ಕೂಟರ್ನಲ್ಲಿ ತಮ್ಮ ತೋಟಕ್ಕೆ ತೆರಳಿರುವುದನ್ನು ಕೆಲವರು ಕಂಡಿದ್ದಾರೆ. ಇಂದು ಮಧ್ಯಾಹ್ನದವರೆಗೆ ಮನೆಗೆ ಬಾರದಿರುವುದನ್ನು ಕಂಡ ಪಕ್ಕದ ಮನೆಯವರು ಕೆಲವು ಸಾರ್ವಜನಿಕರಿಗೆ ವಿಚಾರ ತಿಳಿಸಿದ್ದರು.

ಇದೆ ಸಂದರ್ಭ ಕೂಟಿಯಾಲ ಹೊಳೆ ಸಮೀಪ ತೆರಳಿದ ಕೆಲವರಿಗೆ ಇಂದು ಸಂಜೆ ಮೃತ ದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆಕಸ್ಮಿಕವೂ ಅಥವಾ ಆತ್ಮಹತ್ಯೆಯ ಎಂಬುದನ್ನು ಪೊಲೀಸರ ಮರಣೋತ್ತರ ಪರೀಕ್ಷೆಯಿಂದಲೇ ತಿಳಿಯಬೇಕಾಗಿದೆ. ಅಶ್ವಿನಿಯಾ ಪತಿ ಮಂಡ್ಯ ಮೂಲದವನಾಗಿದ್ದು ಮೈಸೂರಿನಲ್ಲಿ ಹೋಟೆಲ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಕುಟುಂಬ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಬದಲಾಗಿ ಆಕಸ್ಮಿಕವಾಗಿ ಇವರ ತೋಟದ ಬದಿಯಲ್ಲಿ ಇರುವ ಹೂಳಿಗೆ ಜಾರಿ ಬಿದ್ದಿರಬಹುದು ಎಂದು ಹಲವರು ಶಂಕಿಸಿದ್ದಾರೆ. ಶ್ರೀಮಂಗಲ ಪೊಲೀಸರು ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು