Categories: ಕ್ರೈಮ್

ಕೊಡಗಿನಲ್ಲಿ ಬೆಚ್ಚಿ ಬೀಳಿಸಿದೆ ಮೂವರ ನಿಗೂಢ ಸಾವು

ಪೊನ್ನಂಪೇಟೆ: ತಾಲೂಕು ಹುದಿಕೇರಿ ಹುಬ್ಬಳ್ಳಿಯ ಹೈಸೂಡಳುರು ಗ್ರಾಮದ ಐಗುಂದ ಬಳಿ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.

ಹುದಿಕೇರಿಯಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸೇವಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶ್ವಿನಿ (48) ಇಬ್ಬರು ಹೆಣ್ಣು ಮಕ್ಕಳಾದ ನಿಕಿತಾ(21) ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ, ಅಕೆಯ ತಂಗಿ ನವ್ಯ(18) ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದಳು. ಮೂವರ ಶವ ಇಂದು ಕೂಟಿಯಲ ಹೊಳೆಯಲ್ಲಿ ಪತ್ತೆಯಾಗಿದೆ.

ಮೂಲತಹ ಮಾದಾಪುರ ಗ್ರಾಮದ ನಿವಾಸಿಯಾದ ಅಶ್ವಿನಿ ಕಳೆದ ಆರು ವರ್ಷಗಳಿಂದ ಹುದಿಕೇರಿಯಲ್ಲೇ ಸೇವಾ ನಿರತ ಪ್ರತಿನಿಧಿಯಾಗಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸೇವೆ ಸಲ್ಲಿಸುತ್ತಿದ್ದಳು. ಹುದಿಕೇರಿಯಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇವರು ಹೈಸುಡ್ಲೂರು ಬಳಿಯ ಐಗುಂದದಲ್ಲಿ ಒಂದು ಎಕರೆ ಕಾಫಿ ತೋಟವನ್ನು ಕೂಡ ಹೊಂದಿದ್ದರು. ನಿನ್ನೆ ಮಧ್ಯಾಹ್ನ ತಮ್ಮ ಸ್ಕೂಟರ್ನಲ್ಲಿ ತಮ್ಮ ತೋಟಕ್ಕೆ ತೆರಳಿರುವುದನ್ನು ಕೆಲವರು ಕಂಡಿದ್ದಾರೆ. ಇಂದು ಮಧ್ಯಾಹ್ನದವರೆಗೆ ಮನೆಗೆ ಬಾರದಿರುವುದನ್ನು ಕಂಡ ಪಕ್ಕದ ಮನೆಯವರು ಕೆಲವು ಸಾರ್ವಜನಿಕರಿಗೆ ವಿಚಾರ ತಿಳಿಸಿದ್ದರು.

ಇದೆ ಸಂದರ್ಭ ಕೂಟಿಯಾಲ ಹೊಳೆ ಸಮೀಪ ತೆರಳಿದ ಕೆಲವರಿಗೆ ಇಂದು ಸಂಜೆ ಮೃತ ದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆಕಸ್ಮಿಕವೂ ಅಥವಾ ಆತ್ಮಹತ್ಯೆಯ ಎಂಬುದನ್ನು ಪೊಲೀಸರ ಮರಣೋತ್ತರ ಪರೀಕ್ಷೆಯಿಂದಲೇ ತಿಳಿಯಬೇಕಾಗಿದೆ. ಅಶ್ವಿನಿಯಾ ಪತಿ ಮಂಡ್ಯ ಮೂಲದವನಾಗಿದ್ದು ಮೈಸೂರಿನಲ್ಲಿ ಹೋಟೆಲ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಕುಟುಂಬ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಬದಲಾಗಿ ಆಕಸ್ಮಿಕವಾಗಿ ಇವರ ತೋಟದ ಬದಿಯಲ್ಲಿ ಇರುವ ಹೂಳಿಗೆ ಜಾರಿ ಬಿದ್ದಿರಬಹುದು ಎಂದು ಹಲವರು ಶಂಕಿಸಿದ್ದಾರೆ. ಶ್ರೀಮಂಗಲ ಪೊಲೀಸರು ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ashika S

Recent Posts

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

5 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

19 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

34 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

58 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 hour ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago