ಕೊಡಗು: ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಸಂಭವಿಸಿದೆ.
ರಷಿಕ್ ಕುಶಾಲಪ್ಪ(20ವರ್ಷ), ಆಕಾಶ್ ಬಿದ್ದಪ್ಪ(20ವರ್ಷ) ಮತ್ತು ಸುದೀಶ್ ಅಯ್ಯಪ್ಪ(20ವರ್ಷ) ಎಂದು ಮೃತರನ್ನು ಗುರುತಿಸಲಾಗಿದೆ.
ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಇವರಲ್ಲಿ ಮೂವರು ಕೊಚ್ಚಿ ಹೋಗಿದ್ದು ಇಬ್ಬರು ದಡ ಸೇರಿದ್ದಾರೆ. ಸ್ಥಳಕ್ಕೆ ಪೊನ್ನಂಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.