News Karnataka Kannada
Sunday, April 28 2024
ಕ್ರೈಮ್

ಒಂದೇ ದಿನ ಮೂರು ಕಡೆ ಕಳ್ಳತನ: ಪ್ರಕರಣ ದಾಖಲು

Raichur: Three thefts in a single day
Photo Credit : News Kannada

ರಾಯಚೂರು: ಒಂದೇ ದಿನ ಮೂರು ಕಡೆ ಕಳ್ಳತನವಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನ ಕಳ್ಳರು ದೋಚಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ.

ನಗರದ ಬಸ್ ನಿಲ್ದಾಣದ ಬಳಿ ಸಲೀಂ ಎಂಬವರ ಮೊಬೈಲ್ ಅಂಗಡಿಯ ಬೀಗ ಒಡೆದು ಸುಮಾರು 5 ಲಕ್ಷ ರೂ. ಮೌಲ್ಯದ 60 ಮೊಬೈಲ್‍ಗಳನ್ನು ಕಳ್ಳತನ ಮಾಡಲಾಗಿದೆ.ಕಳ್ಳತನದ ವೇಳೆ ಸಿಸಿ ಕ್ಯಾಮೆರಾಗಳನ್ನು ಬೇರೆಡೆಗೆ ತಿರುಗಿಸಿದ್ದಾರೆ.

ಮೊಬೈಲ್ ಅಂಗಡಿ ಅಷ್ಟೇ ಅಲ್ಲದೇ, ಅದೇ ಪ್ರದೇಶದಲ್ಲಿ ಇನ್ನೂ ಎರಡು ಕಡೆ ಕಳ್ಳತನ ಮಾಡಲಾಗಿದೆ. ಮನೆ ಒಂದರ ಕೆಳಗೆ ನಿಲ್ಲಿಸಿದ್ದ ಒಂದು ಬೈಕ್ ಹಾಗೂ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮನೆಗೆ ನುಗ್ಗಿ ಒಂದು ಲ್ಯಾಪ್‍ಟಾಪ್ ಕಳ್ಳತನ ಮಾಡಲಾಗಿದೆ. ಬಳಿಕ ಕಳ್ಳರು ಕದ್ದ ಬೈಕ್‍ನಲ್ಲೇ ಪರಾರಿಯಾಗಿದ್ದಾರೆ.

ಈ ಸಂಬಂಧ ಸಿಂಧನೂರು ನಗರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು