News Karnataka Kannada
Tuesday, April 30 2024
ಕ್ರೈಮ್

ನಿರ್ಭಯಾ ಪ್ರಕರಣ ನೆನಪಿಸುವಂತಿದೆ ಈ ಘೋರ ದುರಂತ !

Rajast
Photo Credit : News Kannada

ರಾಜಸ್ಥಾನ : ಚಲಿಸುತ್ತಿದ್ದ ಬಸ್ ನಲ್ಲಿ  19 ವರ್ಷದ ಯುವತಿ ಮೇಲೆ ಇಬ್ಬರು ಚಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಇದು ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ನೆನಪಿಸುವಂತಿದೆ.

ಡಿ. 9 ಮತ್ತು 10 ರ ಮಧ್ಯರಾತ್ರಿ ರಾಜಸ್ತಾನದ ಕಾನ್ಪುರದಿಂದ ಜೈಪುರಕ್ಕೆ ಹೋಗುತ್ತಿದ್ದ ಯುವತಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ.

ಸಂತ್ರಸ್ತ ಯುವತಿ ತನ್ನ ಚಿಕ್ಕಪ್ಪನ ಮನೆಗೆ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದಳು. ಬಸ್ ಏರಿದ ಸಂತ್ರಸ್ತೆಗೆ ಹೆಣ್ಣು ಮಗಳಿಗೆ ಯಾವುದೇ ಸೀಟುಗಳು ಸಿಗದ ಕಾರಣ, ಅವಳನ್ನು ಕ್ಯಾಬಿನ್ ಮೇಲೆ ಕುಳಿತುಕೊಳ್ಳುವಂತೆ ತಿಳಿಸಿದ್ದಾರೆ. ಅದರಂತೆ  ಯುವತಿ ಕ್ಯಾಬಿನ್ ಮೇಲೆ ಕುಳಿತಿದ್ದಳು.

ಪ್ರಯಾಣದ ಸಮಯದಲ್ಲಿ, ಕ್ಯಾಬಿನ್‌ನಲ್ಲಿದ್ದ ಇತರ ಪ್ರಯಾಣಿಕರು ಹೊರಟು ಹೋದ ಬಳಿಕ ಮಧ್ಯರಾತ್ರಿ ಕಾಮುಕರು ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಸ್ಸಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಫೂಲ್‌ಚಂದ್ ಮೀನಾ ಘಟನೆಯ ಕುರಿತು ತಿಳಿಸಿದ್ದಾರೆ.

ಇನ್ನು ಉಳಿದಿದ್ದ ಪ್ರಯಾಣಿಕರು ಕ್ಯಾಬಿನ್ ಬಾಗಿಲು ತೆರೆದು ನೋಡಿದಾಗ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಚಾಲಕನ್ನು ಹಿಡಿದು ಥಳಿಸಿದ್ದಾರೆ. ಇಬ್ಬರು ಚಾಲಕರ ಪೈಕಿ ಒಬ್ಬ ತಪ್ಪಿಸಿಕೊಂಡಿದ್ದಾನೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು