ವಿಜಯಪುರ: ವಿಜಯಪುರ ತಾಲೂಕಿನ ಕವಲಗಿ ಬಳಿ ಹೆದ್ದಾರಿಯಲ್ಲಿ 2 ಸರ್ಕಾರಿ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
ಸಾಜೀದಾ ಬೇಗಂ(36), ರೋಹಿಣಿ ಪಂಚಾಳ(31) ಮೃತರು. ಸಾಜೀದಾ ಬಸನವಬಾಗೇಬಾಡಿ ತಾಲೂಕಿನ ಡೋಣೂರು ನಿವಾಸಿ. ಮೃತ ರೋಹಿಣಿ ಪಂಚಾಳ ಕಲಬುರಗಿ ನಗರದ ನಿವಾಸಿ. ಸದ್ಯ ಗಾಯಾಳು ಪ್ರಯಾಣಿಕರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಪಘಾತ ಹಿನ್ನೆಲೆ ಸಂಚಾರ ಬಂದ್ ಮಾಡಲಾಗಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.