ಕ್ರೈಮ್

ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು: ತುಮಕೂರು  ಜಿಲ್ಲೆ ಹುಲಿಯೂರು ದುರ್ಗದಲ್ಲಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಚನ್ನಪಟ್ಟಣ ಮೂಲದ ಅಮಾನುತುಲ್ಲಾ ಖಾನ್ (60), ಮುನಾವರ್ (50) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಈ ಇಬ್ಬರು ಬೈಕ್ ಸವಾರರು ಕಳೆದ ರಾತ್ರಿ ಹುಲಿಯೂರು ದುರ್ಗದ ಕಡೆಯಿಂದ ಚನ್ನಪಟ್ಟಣದ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ರಸ್ತೆಯಲ್ಲಿ ಬಿದ್ದಿದ್ದು, ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಇನ್ನು ಸೀತಾ ಮಾತೆ ಮಂದಿರ ನಿರ್ಮಾಣ ಮಾಡುತ್ತೇವೆ: ಸಚಿವ ಅಮಿತ್​​ ಶಾ

ರಾಮ ಮಂದಿರವಾಯಿತು. ಇನ್ನು ಸೀತಾ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಹೇಳಿದ್ದಾರೆ. ಬಿಹಾರದ…

2 mins ago

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.

11 mins ago

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…

20 mins ago

ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ

ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…

31 mins ago

ಕೋವಿಶೀಲ್ಡ್ ನಂತೆ ‘ಕೋವ್ಯಾಕ್ಸಿನ್’ ಕೂಡ ಅಡ್ಡಪರಿಣಾಮಗಳನ್ನು ಹೊಂದಿದೆ: ವರದಿ

ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…

41 mins ago

ಹಾವುಗಳ ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಮಾಡಿದ ಬೆಂಗಳೂರು ಮಹಾನಗರ ಪಾಲಿಕೆ

ಹಾವುಗಳ ರಕ್ಷಣೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್‌ ಕರ್ನಾಟಕ ಎಕ್ಸ್‌ ಖಾತೆಯಲ್ಲಿ…

50 mins ago