ಭಿಲ್ವಾರಾ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಉದಯಪುರ ಸಿಟಿ-ಜೈಪುರ್ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಕಲ್ಲು ಎಸೆದ ಕಾರಣ ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ರೈಲು ಸಿಬ್ಬಂದಿ ಗಾಯಗೊಂಡಿಲ್ಲ. ರಾಯಲ ನಿಲ್ದಾಣದ ಮೂಲಕ ರೈಲು ಹಾದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ರೈಲು ಮೇಲೆ ಕಲ್ಲು ಎಸೆದಿದ್ದು, ಕೊನೆಯ (ಸಿ7) ಕೋಚ್ನ ಕಿಟಕಿಗೆ ಹಾನಿಯಾಗಿದೆ ಎಂದು ಚಿತ್ತೋರ್ಗಢ ಜಿಆರ್ಪಿ ನಿಲ್ದಾಣದ ಛೋಟುಲಾಲ್ ಹೇಳಿದ್ದಾರೆ.
ರಾಯಲ ಠಾಣಾಧಿಕಾರಿಗಳ ವರದಿ ಆಧರಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.