ಘಾಜಿಯಾಬಾದ್: ಕ್ಷುಲ್ಲಕ ಕಾರಣಕ್ಕೆ ಮದುವೆ ಮನೆಯಲ್ಲಿ ವೇಯ್ಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದಿದೆ. ನವೆಂಬರ್ 17 ರಂದು ಘಟನೆ ನಡೆದಿತ್ತು, ಆಗ ಪಂಕಜ್ ಅಂಕುರ್ ವಿಹಾರ್ನ ಸಿಜಿಎಸ್ ವಾಟಿಕಾದಲ್ಲಿ ವೇಯ್ಟರ್ ಆಗಿ ಕೆಲಸ ಮಾಡುತ್ತಿದ್ದರು.
ಸಮಾರಂಭದಲ್ಲಿ ಆಹಾರವನ್ನು ಸರ್ವ್ ಮಾಡುತ್ತಿದ್ದಾಗ, ಪಂಕಜ್ ಅವರ ಬಳಿಯಿದ್ದ ಎಂಜಿಲು ಪ್ಲೇಟ್ಗಳು ರಿಷಬ್ ಮತ್ತು ಅವರ ಇಬ್ಬರು ಸ್ನೇಹಿತರಿಗೆ ಅಚಾನಕ್ಕಾಗಿ ತಾಗಿತ್ತು, ಆಗ ಜಗಳ ಪ್ರಾರಂಭವಾಗಿತ್ತು.
ರಿಷಭ್ ಮತ್ತು ಆತನ ಸ್ನೇಹಿತರೊಂದಿಗೆ ನಡೆದ ಜಗಳದಲ್ಲಿ ಪಂಕಜ್ ನೆಲದ ಮೇಲೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡರು. ಬಳಿಕ ಆತನನ್ನು ಕೊಲೆ ಮಾಡಿ ಕಾಡಿಗೆ ಎಸೆದಿದ್ದಾರೆ. ನ.18ರಂದು ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.