News Karnataka Kannada
Saturday, April 27 2024
ಕ್ರೈಮ್

ಪತಿ ಪ್ರವಾಸಕ್ಕೆ ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂಬ ಕಾರಣ: ಮೂಗಿಗೆ ಗುದ್ದಿ ಹತ್ಯೆ ಮಾಡಿದ ಪತ್ನಿ

Wife slaps husband to Dubai for not taking him on trip
Photo Credit : News Kannada

ಪುಣೆ: ಗಂಡ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ  ನೀಡಲಿಲ್ಲವೆಂದು, ಪ್ರವಾಸಕ್ಕೆ ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂಬ ಕಾರಣಕ್ಕಾಗಿ ಹೆಂಡತಿ ಪತಿಯ ಮೂಗಿಗೆ ಗುದ್ದಿ ಹತ್ಯೆ ಮಾಡಿದ ಘಟನೆ  ನಡೆದಿದೆ .

ಗಂಡ  ನಿಖಿಲ್ ಖನ್ನಾ ಹೆಂಡತಿಯ ಹುಟ್ಟುಹಬ್ಬಕ್ಕೆ ದುಬೈಗೆ ಪ್ರವಾಸ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕಾಗಿ ದಂಪತಿ ಮಧ್ಯೆ ಜಗಳವಾಗಿದೆ. ಈ ಜಗಳದಿಂದ ಪತ್ನಿ  ರೇಣುಕಾ ಪತಿಯ ಮೂಗಿಗೆ ಗುದ್ದಿದ್ದರಿಂದ 36 ವರ್ಷದ ನಿಖಿಲ್ ಖನ್ನಾ ಸಾವನ್ನಪ್ಪಿದ್ದಾರೆ.

ಪುಣೆಯ ವನವಡಿ ಬಡಾವಣೆಯಲ್ಲಿರುವ ದಂಪತಿಯ ನಿವಾಸದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಆರು ವರ್ಷಗಳ ಹಿಂದೆ, ರಿಯಲ್​ ಎಸ್ಟೇಟ್​ ನಿರ್ಮಾಣ ಉದ್ಯಮದ ಉದ್ಯಮಿ ನಿಖಿಲ್ ಖನ್ನಾ ಅವರು 38 ವರ್ಷದ ರೇಣುಕಾ ಅವರನ್ನು ಪ್ರೀತಿಸಿ, ವಿವಾಹವಾಗಿದ್ದರು.

ವನವಡಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಪತಿ ನಿಖಿಲ್ ಖನ್ನಾ ತನ್ನ ಹೆಂಡತಿಯ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆಯನ್ನು ಉಡುಗೊರೆಯಾಗಿ ನೀಡಲಿಲ್ಲ ಮತ್ತು ಅವಳು ಬಯಸಿದಂತೆ ದುಬೈಗೆ ಪ್ರಪ್ರವಾಸಕ್ಕೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕಾಗಿ ದಂಪತಿ ಜಗಳವಾಡಿದ್ದರಂತೆ. ಈ  ತೀವ್ರ ವಾಗ್ವಾದದ ವೇಳೆ ರೇಣುಕಾ ತನ್ನ ಪತಿ ನಿಖಿಲ್ ಮುಖಕ್ಕೆ ಹೊಡೆದಿದ್ದಾಳೆ. ಗುದ್ದಿದ ರಭಸಕ್ಕೆ ನಿಖಿಲ್ ಅವರ ಮೂಗು ಮತ್ತು ಕೆಲವು ಹಲ್ಲುಗಳು ಮುರಿದಿವೆ. ಭಾರೀ ರಕ್ತಸ್ರಾವದಿಂದ ನಿಖಿಲ್ ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿದ್ದಾರೆ.

ಪೊಲೀಸರು ರೇಣುಕಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಅವರನ್ನು ಬಂಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು