ಅಸ್ಸಾಂ: ವಾಮಾಚಾರದ ಶಂಕೆಯಿಂದ ಮಹಿಳೆಯನ್ನು ಸಜೀವವಾಗಿ ದಹಿಸಿರುವ ಘಟನೆ ಅಸ್ಸಾಂನ ಸೋನಿತ್ಪುರ ಜಿಲ್ಲೆಯಲ್ಲಿ ನಡೆದಿದೆ. 30 ವರ್ಷದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಧುರಿಮಾ ದಾಸ್ ಅವರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸಂಗೀತಾ ಕತಿ ಎಂಬ ಮಹಿಳೆಯು ವಾಮಾಚಾರ ವೆಸಗಿ ತೊಂದರೆ ನೀಡುತ್ತಿದ್ದರಂತೆ. ಹೀಗಾಗಿ ಆಕೆಯ ಮೇಲೆ ನೆರೆಹೊರೆಯವರು ದಾಳಿ ಮಾಡಿದ್ದಾರೆ. ಕುಡಿದ ಅಮಲಿನಲ್ಲಿದ್ದ ದಾಳಿಕೋರರು ಆಕೆಯ ಪತಿಯನ್ನು ಕಟ್ಟಿಹಾಕಿ ನಂತರ ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.