ಬೆಂಗಳೂರು: ಇತ್ತೀಚೆಗೆ ಕ್ಷುಲ್ಲಕ ವಿಚಾರಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ತವರು ಮನೆಗೆ ತೆರಳುವ ವಿಚಾರದಲ್ಲಿ ದಂಪತಿ ನಡುವೆ ಕಲಹವಾಗಿದ್ದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ.
ಹನ್ನೊಂದು ತಿಂಗಳ ಗಂಡು ಮಗು ಬಿಟ್ಟು ಪವಿತ್ರಾ (28) ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ವರ್ಷದ ಹಿಂದೆ ಹಿರಿಯೂರು ಮೂಲದ ಚೇತನ್ ಜೊತೆ ಪವಿತ್ರಾಳ ಮದುವೆಯಾಗಿತ್ತು. ಸದ್ಯ ಸಾಲು ಸಾಲು ರಜೆ ಹಿನ್ನೆಲೆ ಮೂರು ದಿನ ಹುಳಿಯಾರಿನಲ್ಲಿರುವ ತನ್ನ ತವರು ಮನೆಗೆ ಹೋಗಲು ಪತ್ನಿ ಹೇಳಿದ್ದಾಳೆ. ಆಗ ಪತ್ನಿ ಮಾತು ನಿರಾಕರಿಸಿ ತನ್ನೂರು ಹಿರಿಯೂರಿಗೆ ಹೋಗಲು ಪತಿ ವಾಗ್ವಾದ ಮಾಡಿದ್ದಾನೆ. ಈ ರೀತಿ ಶುರುವಾಗ ಜಗಳ ತಾರಕಕ್ಕೇರಿದ್ದು ಸಿಟ್ಟಿನಿಂದ ಪವಿತ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನು ಮತ್ತೊಂದೆಡೆ ಇಂದು ಸಂಜೆ ಪವಿತ್ರ ಮಾವನ ಮಗಳ ಆರಕ್ಷತೆ ಕಾರ್ಯಕ್ರಮವಿತ್ತು. ಹೀಗಾಗಿ ಊರಿಗೆ ಹೋಗಲು ಪವಿತ್ರಾ ಒತ್ತಾಯಿಸಿದ್ದರು. ಆದರೆ ತನ್ನ ಊರಿಗೆ ಹೋಗೋಣ ಎಂದು ಪತಿ ಕೂಡ ವಾಗ್ವಾದ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ಹೆಚ್ಚಾಗಿದ್ದು ಸಿಟ್ಟಿನಿಂದ ಚೇತನ್ ತನ್ನ ಮಗುವನ್ನು ಎತ್ತಿಕೊಂಡು ಹೊರಗೆ ಹೋಗಿದ್ದು ಪವಿತ್ರಾ ಪ್ಯಾನಿಗೆ ಸೀರೆಯಿಂದ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821