ಮಂಡ್ಯ: ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗುತ್ತಿದೆ. ಕೆಲದಿನಗಳ ಹಿಂದೆ ಕೋತಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟದ್ದರು. ಇದೀಗ ಮಂಡ್ಯದ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಕಾಡಾನೆ ತುಳಿತಕ್ಕೆ ರೈತ ಮಹಿಳೆ ಸಾವನ್ನಪ್ಪಿದ್ದಾರೆ. ಲಾಳನಕೆರೆ ಗ್ರಾಮದ ಸಾಕಮ್ಮ ಎಂಬವರು ಇಂದು ಬೆಳಗ್ಗೆ ಜಮೀನಿನ ಬಳಿ ಹೋಗಿದ್ದಾಗ ಅಲ್ಲೇ ಇದ್ದ ಆನೆ ಅವರನ್ನು ಅಟ್ಟಿಸಿಕೊಂಡು ಬಂದು ದಾಳಿ ಮಾಡಿ ಕೊಂದು ಹಾಕಿದೆ. ಒಂಟಿ ಆನೆ ದಾಳಿಗೆ ಸಾಕಮ್ಮ ಮೃತಪಟ್ಟಿದ್ದಾಳೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ.
ಮಹಿಳೆಯನ್ನು ಕೊಂದ ಆನೆಯೂ ಪತ್ತೆಯಾಗಿದ್ದು, ಅದು ತೋಟವನ್ನು ದಾಟಿ ವಿಸಿ ನಾಲೆಯಲ್ಲಿ ಈಜಾಡುತ್ತಿರುವುದು ಕಂಡುಬಂದಿದೆ.