ಬೆಂಗಳೂರು: ಸಿಲಿಕಾನ್ ಸಿಟಿಯ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ.
ಮಹಿಳೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ.
ನಗರದ ಕಬ್ಬನ್ ಪೇಟೆ ನಿವಾಸಿಯಾಗಿರುವ ಪುಷ್ಪಾ ಅವರು ಮನೆಯಿಂದ ಬೇಕರಿಗೆ ತೆರಳುವ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರ ಗಾಯಗೊಮಡು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಪುಷ್ಪಾ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಸ್ ಚಾಲಕ ನಾಗರಾಜ್ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.