News Karnataka Kannada
Sunday, May 05 2024
ಕ್ರೈಮ್

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​: ಮಹಿಳೆ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್​ ಪ್ರಕರಣ ನಡೆದಿದೆ. ಓರ್ವ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ  ನಗರದ  ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. 
Photo Credit : News Kannada

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್​ ಪ್ರಕರಣ ನಡೆದಿದೆ. ಓರ್ವ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ  ನಗರದ  ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಆಶಾರಾಣಿ 62 ವರ್ಷ ಎಂದು ಗುರುತಿಸಲಾಗಿದೆ .

ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಆಶಾರಾಣಿ ಅವರು ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಆರು ಘಂಟೆ ಸಮಯದಲ್ಲಿ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು